ಬ್ರೇಕಿಂಗ್ ನ್ಯೂಸ್
21-06-23 08:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 21: ರಸ್ತೆಗೆ ಅಡ್ಡ ಬಂದಿದ್ದ ಮಹಿಳೆಯನ್ನು ತನ್ನ ಚಾಕಚಕ್ಯತೆಯಿಂದ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ ಚಾಲಕನ ವಿರುದ್ಧ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಡಿಪು ಭಾಗದಿಂದ ತೌಡುಗೋಳಿ ಕ್ರಾಸ್ ಮೂಲಕ ಮಂಗಳೂರು ತೆರಳುತ್ತಿದ್ದ ಗೋಪಾಲಕೃಷ್ಣ ಹೆಸರಿನ ಖಾಸಗಿ ಬಸ್ ಜೂನ್ 20ರಂದು ಮಧ್ಯಾಹ್ನ ಬರುತ್ತಿದ್ದಾಗ ಮಹಿಳೆ ಅಡ್ಡ ಬಂದ ಘಟನೆ ನಡೆದಿತ್ತು. ತೌಡುಗೋಳಿ ಕ್ರಾಸ್ ನಲ್ಲಿ ಮಹಿಳೆ ಅಡ್ಡ ಬಂದಿದ್ದು ಕೂಡಲೇ ಗಮನಿಸಿದ ಚಾಲಕ ನಾಗರಾಜ್ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ್ದರು. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ನಾಗರಾಜ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.


ವಿಡಿಯೋದಲ್ಲಿ ಬಸ್ ವೇಗವಾಗಿ ಬರುತ್ತಿರುವುದು ದಾಖಲಾಗಿದ್ದು, ಅದನ್ನು ಅನುಸರಿಸಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯೆಂದು ಹೇಳಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಅಲ್ಲದೆ, ಆ ಬಸ್ಸನ್ನು ಸೀಜ್ ಮಾಡಿ ಠಾಣೆಗೆ ತಂದು ಇರಿಸಿದ್ದಾರೆ. ಚಾಲಕನ ವಿರುದ್ಧ ಸೆಕ್ಷನ್ 279, 336 ಐಪಿಸಿ ಜೊತೆಗೆ ಮೋಟಾರು ವಾಹನ ಕಾಯ್ದೆ 211-2 ಪ್ರಕಾರ ಕೇಸು ದಾಖಲಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ನಿರ್ಲಕ್ಷ್ಯದಿಂದ ರಸ್ತೆ ದಾಟುತ್ತಿದ್ದ ಮಹಿಳೆಯ ಪ್ರಾಣ ಉಳಿದಿತ್ತು.
ಎದುರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಅನುಸರಿಸಿ ಅಡ್ಡಲಾಗಿ ವಾಹನ ಬರುವುದನ್ನೂ ಲೆಕ್ಕಿಸದೆ ಮುಸ್ಲಿಂ ಮಹಿಳೆಯೊಬ್ಬರು ರಸ್ತೆ ದಾಟಲು ಮುಂದಾಗಿದ್ದರು. ಇದೇ ವೇಳೆ ಬಸ್ ಬಂದಿದ್ದು, ಹಠಾತ್ ಬ್ರೇಕ್ ಹಾಕಿ ಬದಿಗೆ ಸರಿಸಿದ್ದರಿಂದ ಮಹಿಳೆ ಕೂದಲೆಳೆಯಲ್ಲಿ ಬಚಾವ್ ಆಗಿದ್ದರು. ಇದೀಗ ಚಾಲಕನ ವಿರುದ್ಧವೇ ಪೊಲೀಸರು ಕೇಸು ದಾಖಲಿಸಿ ಖಾಸಗಿ ಬಸ್ಗಳ ಧಾವಂತಕ್ಕೆ ಪಾಠ ಕಲಿಸಲು ಮುಂದಾಗಿದ್ದಾರೆ. ಒಳರಸ್ತೆಯಲ್ಲಿ ಸಾಗುವ ಸಂದರ್ಭದಲ್ಲಿ ದುಡುಕುತನ ಮತ್ತು ವೇಗದ ಚಾಲನೆ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.
Police file case against bus that saved womans life while crossing road at Naringana in Mangalore for rash driving.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm