ಬ್ರೇಕಿಂಗ್ ನ್ಯೂಸ್
01-11-20 08:59 pm Mangaluru Correspondent ಕರಾವಳಿ
ಮಂಗಳೂರು, ನ.1: ಪ್ರತ್ಯೇಕ ತುಳು ರಾಜ್ಯಕ್ಕಾಗಿ ಬಾಂಬ್ ಸ್ಫೋಟ ಮಾಡಿ ಜನರನ್ನು ಪ್ರಚೋದಿಸಬೇಕೆಂದು ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಹೇಳುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.
ಪ್ರತ್ಯೇಕ ತುಳು ರಾಜ್ಯಕ್ಕಾಗಿ ಹೋರಾಟ ಭುಗಿಲೇಳಬೇಕು. ಇದಕ್ಕಾಗಿ ದೊಡ್ಡ ಮಟ್ಟದಲ್ಲಿ ‘ಬ್ಲಾಸ್ಟ್’ ಮಾಡಬೇಕು. ಟಯರ್ಗಳಿಗೆ ಬೆಂಕಿ ಹಚ್ಚಬೇಕು. ಡಿ.ವಿ.ಸದಾನಂದ ಗೌಡ, ನಳಿನ್ ಕುಮಾರ್ ಕಟೀಲು ಸೇರಿದಂತೆ ರಾಜಕೀಯ ನಾಯಕರಿಗೆಲ್ಲ ಹಿಗ್ಗಾಮುಗ್ಗ ಬೈಯ್ಯಬೇಕು ಎಂದು ಹೇಳುತ್ತಿರುವುದು ಆಡಿಯೋದಲ್ಲಿದೆ. ತುಳುವಿನಲ್ಲಿ ಯಾರೊಂದಿಗೋ ಮಾತನಾಡುತ್ತಿರುವ ವೇಳೆ ಈ ಆಡಿಯೋ ರೆಕಾರ್ಡ್ ಮಾಡಲಾಗಿದ್ದು ಉದ್ದೇಶಪೂರ್ವಕ ಇದನ್ನು ರೆಕಾರ್ಡ್ ಮಾಡಿ ಜಾಲತಾಣದಲ್ಲಿ ಬಿಡಲಾಗಿದೆ. ರಾಜ್ಯದ ಮೂಲೆ ಮೂಲೆಯಲ್ಲಿ ತುಳು ರಾಜ್ಯಕ್ಕಾಗಿ ಹೋರಾಟ ಆದಲ್ಲಿ ಅಕಾಡಮಿಯವರನ್ನು ಕರೆದು ಸರಕಾರದ ಕಡೆಯಿಂದ ಮಾತುಕತೆ ನಡೆಸುತ್ತಾರೆ. ಆಗ ನಾವು ಹೋರಾಟಗಾರರನ್ನು ಸಮಾಧಾನಿಸಲು ಬೇರೆ ದಾರಿ ಇಲ್ಲ. ತುಳು ರಾಜ್ಯ ಘೋಷಣೆಯೇ ಮಾಡಬೇಕು ಎಂದು ಹೇಳಬಹುದು. ಹೀಗೆಂದು ದಯಾನಂದ್ ಕತ್ತಲ್ಸಾರ್ ಮಾತನಾಡಿದ್ದಾರೆ ಎನ್ನಲಾಗುವ ಆಡಿಯೋ ಇದ್ದು ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬಂದಿದೆ.

ಸರಕಾರದ ಅಕಾಡಮಿಯ ಅಧ್ಯಕ್ಷರಾಗಿರುವ ವ್ಯಕ್ತಿಯೊಬ್ಬರು ಹೀಗೆ ಹಿಂಸೆಗೆ ಪ್ರಚೋದಿಸುವ ರೀತಿ ಹೇಳಿಕೆ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಯಾನಂದ ಕತ್ತಲ್ಸಾರ್, ಅದು ತನ್ನದೇ ಆಡಿಯೋ.. ಆದರೆ ಅದನ್ನು ಉದ್ದೇಶಪೂರ್ವಕ ಎಡಿಟ್ ಮಾಡಿ ಬಿಡಲಾಗಿದೆ. ಇದು ನನ್ನ ತೇಜೋವಧೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ.
ತಾನೇ ವೈರಲ್ ಮಾಡಿದ್ದಾಗಿ ಹೇಳಿಕೆ !
ಇದೇ ವೇಳೆ, ಆಡಿಯೋ ಪ್ರಸಾರವನ್ನು ತಾನೇ ಮಾಡಿದ್ದಾಗಿ ತುಳುನಾಡು ಟ್ರಸ್ಟ್ ಅಧ್ಯಕ್ಷ ಜಿ.ವಿ.ಎ ಸ್.ಉಳ್ಳಾಲ್ ಎಂಬವರು ಹೇಳಿದ್ದಾರೆ. ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್, ತುಳುನಾಡು ಸ್ಥಾಪನೆಗಾಗಿ ಈ ರೀತಿ ಪ್ರಚೋದನಾತ್ಮಕವಾಗಿ ನನ್ನ ಜೊತೆಯೇ ಮಾತನಾಡಿದ್ದು. ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಹೀಗೆ ಮಾತನಾಡುವುದು ಸರಿಯಲ್ಲ. ಇದೇ ಕಾರಣಕ್ಕೆ ಈ ಮಾತುಕತೆಯ ಆಡಿಯೋವನ್ನು ವೈರಲ್ ಮಾಡಿದ್ದೇನೆ ಎಂದು ಜಿ.ವಿ.ಎಸ್.ಉಳ್ಳಾಲ್ ತಿಳಿಸಿದ್ದಾರೆ.
ತುಳು ಲಿಪಿ ವಿಚಾರವಾಗಿ ದಯಾನಂದ ಕತ್ತಲ್ಸಾರ್ ಅವರನ್ನು ಭೇಟಿಯಾಗಿದ್ದೆ. ಈ ವೇಳೆ ಮಾಹಿತಿಗಾಗಿ ಅವರ ಮಾತುಗಳನ್ನು ರೆಕಾರ್ಡ್ ಮಾಡಿಕೊಂಡಿದ್ದೆ. ಕತ್ತಲ್ಸಾರ್ ಮಾತನಾಡುತ್ತಾ, ಪ್ರತ್ಯೇಕ ತುಳು ರಾಜ್ಯಕ್ಕಾಗಿ ತುಳುನಾಡು ಟ್ರಸ್ಟ್ ಮೂಲಕ ಹಿಂಸೆಗೆ ಇಳಿಯುವಂತೆ ಹೇಳಿದ್ದರು ಎಂದಿದ್ದಾರೆ.
Tulu Academy President Dayananda Kathalsar lands in trouble for controversial statement of stating to Blast Managluru to make it a complete Tulu speaking District. Audio of this has gone viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am