ಬ್ರೇಕಿಂಗ್ ನ್ಯೂಸ್
01-11-20 08:59 pm Mangaluru Correspondent ಕರಾವಳಿ
ಮಂಗಳೂರು, ನ.1: ಪ್ರತ್ಯೇಕ ತುಳು ರಾಜ್ಯಕ್ಕಾಗಿ ಬಾಂಬ್ ಸ್ಫೋಟ ಮಾಡಿ ಜನರನ್ನು ಪ್ರಚೋದಿಸಬೇಕೆಂದು ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಹೇಳುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.
ಪ್ರತ್ಯೇಕ ತುಳು ರಾಜ್ಯಕ್ಕಾಗಿ ಹೋರಾಟ ಭುಗಿಲೇಳಬೇಕು. ಇದಕ್ಕಾಗಿ ದೊಡ್ಡ ಮಟ್ಟದಲ್ಲಿ ‘ಬ್ಲಾಸ್ಟ್’ ಮಾಡಬೇಕು. ಟಯರ್ಗಳಿಗೆ ಬೆಂಕಿ ಹಚ್ಚಬೇಕು. ಡಿ.ವಿ.ಸದಾನಂದ ಗೌಡ, ನಳಿನ್ ಕುಮಾರ್ ಕಟೀಲು ಸೇರಿದಂತೆ ರಾಜಕೀಯ ನಾಯಕರಿಗೆಲ್ಲ ಹಿಗ್ಗಾಮುಗ್ಗ ಬೈಯ್ಯಬೇಕು ಎಂದು ಹೇಳುತ್ತಿರುವುದು ಆಡಿಯೋದಲ್ಲಿದೆ. ತುಳುವಿನಲ್ಲಿ ಯಾರೊಂದಿಗೋ ಮಾತನಾಡುತ್ತಿರುವ ವೇಳೆ ಈ ಆಡಿಯೋ ರೆಕಾರ್ಡ್ ಮಾಡಲಾಗಿದ್ದು ಉದ್ದೇಶಪೂರ್ವಕ ಇದನ್ನು ರೆಕಾರ್ಡ್ ಮಾಡಿ ಜಾಲತಾಣದಲ್ಲಿ ಬಿಡಲಾಗಿದೆ. ರಾಜ್ಯದ ಮೂಲೆ ಮೂಲೆಯಲ್ಲಿ ತುಳು ರಾಜ್ಯಕ್ಕಾಗಿ ಹೋರಾಟ ಆದಲ್ಲಿ ಅಕಾಡಮಿಯವರನ್ನು ಕರೆದು ಸರಕಾರದ ಕಡೆಯಿಂದ ಮಾತುಕತೆ ನಡೆಸುತ್ತಾರೆ. ಆಗ ನಾವು ಹೋರಾಟಗಾರರನ್ನು ಸಮಾಧಾನಿಸಲು ಬೇರೆ ದಾರಿ ಇಲ್ಲ. ತುಳು ರಾಜ್ಯ ಘೋಷಣೆಯೇ ಮಾಡಬೇಕು ಎಂದು ಹೇಳಬಹುದು. ಹೀಗೆಂದು ದಯಾನಂದ್ ಕತ್ತಲ್ಸಾರ್ ಮಾತನಾಡಿದ್ದಾರೆ ಎನ್ನಲಾಗುವ ಆಡಿಯೋ ಇದ್ದು ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬಂದಿದೆ.

ಸರಕಾರದ ಅಕಾಡಮಿಯ ಅಧ್ಯಕ್ಷರಾಗಿರುವ ವ್ಯಕ್ತಿಯೊಬ್ಬರು ಹೀಗೆ ಹಿಂಸೆಗೆ ಪ್ರಚೋದಿಸುವ ರೀತಿ ಹೇಳಿಕೆ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಯಾನಂದ ಕತ್ತಲ್ಸಾರ್, ಅದು ತನ್ನದೇ ಆಡಿಯೋ.. ಆದರೆ ಅದನ್ನು ಉದ್ದೇಶಪೂರ್ವಕ ಎಡಿಟ್ ಮಾಡಿ ಬಿಡಲಾಗಿದೆ. ಇದು ನನ್ನ ತೇಜೋವಧೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ.
ತಾನೇ ವೈರಲ್ ಮಾಡಿದ್ದಾಗಿ ಹೇಳಿಕೆ !
ಇದೇ ವೇಳೆ, ಆಡಿಯೋ ಪ್ರಸಾರವನ್ನು ತಾನೇ ಮಾಡಿದ್ದಾಗಿ ತುಳುನಾಡು ಟ್ರಸ್ಟ್ ಅಧ್ಯಕ್ಷ ಜಿ.ವಿ.ಎ ಸ್.ಉಳ್ಳಾಲ್ ಎಂಬವರು ಹೇಳಿದ್ದಾರೆ. ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್, ತುಳುನಾಡು ಸ್ಥಾಪನೆಗಾಗಿ ಈ ರೀತಿ ಪ್ರಚೋದನಾತ್ಮಕವಾಗಿ ನನ್ನ ಜೊತೆಯೇ ಮಾತನಾಡಿದ್ದು. ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಹೀಗೆ ಮಾತನಾಡುವುದು ಸರಿಯಲ್ಲ. ಇದೇ ಕಾರಣಕ್ಕೆ ಈ ಮಾತುಕತೆಯ ಆಡಿಯೋವನ್ನು ವೈರಲ್ ಮಾಡಿದ್ದೇನೆ ಎಂದು ಜಿ.ವಿ.ಎಸ್.ಉಳ್ಳಾಲ್ ತಿಳಿಸಿದ್ದಾರೆ.
ತುಳು ಲಿಪಿ ವಿಚಾರವಾಗಿ ದಯಾನಂದ ಕತ್ತಲ್ಸಾರ್ ಅವರನ್ನು ಭೇಟಿಯಾಗಿದ್ದೆ. ಈ ವೇಳೆ ಮಾಹಿತಿಗಾಗಿ ಅವರ ಮಾತುಗಳನ್ನು ರೆಕಾರ್ಡ್ ಮಾಡಿಕೊಂಡಿದ್ದೆ. ಕತ್ತಲ್ಸಾರ್ ಮಾತನಾಡುತ್ತಾ, ಪ್ರತ್ಯೇಕ ತುಳು ರಾಜ್ಯಕ್ಕಾಗಿ ತುಳುನಾಡು ಟ್ರಸ್ಟ್ ಮೂಲಕ ಹಿಂಸೆಗೆ ಇಳಿಯುವಂತೆ ಹೇಳಿದ್ದರು ಎಂದಿದ್ದಾರೆ.
Tulu Academy President Dayananda Kathalsar lands in trouble for controversial statement of stating to Blast Managluru to make it a complete Tulu speaking District. Audio of this has gone viral on social media.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm