ಬ್ರೇಕಿಂಗ್ ನ್ಯೂಸ್
22-06-23 08:35 pm Mangalore Correspondent ಕರಾವಳಿ
ಮಂಗಳೂರು, ಜೂನ್ 22: ಕೋಣಾಜೆ ಠಾಣೆ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ನಲ್ಲಿ ಬಸ್ ಬರುತ್ತಿದ್ದಾಗ ಮಹಿಳೆ ರಸ್ತೆ ದಾಟಿದ್ದ ಸಿಸಿಟಿವಿ ದೃಶ್ಯ ವೈರಲ್ ಆಗಿತ್ತು. ಮಹಿಳೆ ರಸ್ತೆ ದಾಟುವುದನ್ನು ನೋಡಿದ ಬಸ್ ಚಾಲಕ ಬಸ್ಸನ್ನು ಬದಿಗೆ ಸರಿಸಿ ಮಹಿಳೆಯನ್ನು ರಕ್ಷಿಸಿದ್ದು ಮೆಚ್ಚುಗೆಗೂ ಕಾರಣವಾಗಿತ್ತು. ಇದೀಗ ರಸ್ತೆ ನಿಯಮ ಪಾಲಿಸದೆ ನಿರ್ಲಕ್ಷ್ಯದಿಂದ ರಸ್ತೆ ದಾಟಿದ್ದ ಮಹಿಳೆಯ ವಿರುದ್ಧ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಮೋಟಾರು ವಾಹನ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಸಿಸಿಟಿವಿ ದೃಶ್ಯದಲ್ಲಿ ಬಸ್ ವೇಗವಾಗಿ ಬರುತ್ತಿದ್ದುದನ್ನು ಗಮನಿಸಿ ಮಂಗಳೂರು ಪೊಲೀಸರು ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆಯೆಂದು ಪ್ರಕರಣ ದಾಖಲಿಸಿದ್ದರು. ಬಸ್ಸನ್ನು ಬದಿಗೆ ಸರಿಸಿ ಮಹಿಳೆಯನ್ನು ರಕ್ಷಣೆ ಮಾಡಿದ್ದ ಚಾಲಕನ ವಿರುದ್ಧ ಕೇಸು ದಾಖಲಿಸಿದ್ದಕ್ಕೆ ಆಕ್ಷೇಪವೂ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸಿಸಿಟಿವಿ ವಿಡಿಯೋ ಆಧರಿಸಿ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದು, ನಿರ್ಲಕ್ಷ್ಯದಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವುದೂ ಮೋಟಾರು ವಾಹನ ಕಾಯ್ದೆಗೆ ವಿರುದ್ಧ. ಪಾದಚಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಮಹಿಳೆಯ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 13 ಮತ್ತು ಪೊಲೀಸ್ ಏಕ್ಟ್ 92 ಜಿ ಪ್ರಕಾರ ಕೇಸು ದಾಖಲಿಸಿಕೊಳ್ಳಲಾಗಿದ್ದು, ದಂಡ ವಿಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಿರ್ಲಕ್ಷ್ಯದಿಂದ ರಸ್ತೆಯಲ್ಲಿ ನಡೆಯುವ ಮಂದಿಗೆ ಇದೇ ಮೊದಲ ಬಾರಿಗೆ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದ್ದು, ಈ ರೀತಿ ಮಾಡುವ ಮಂದಿ ಇನ್ಮುಂದೆ ಎಚ್ಚರಿಕೆ ವಹಿಸಬೇಕಾಗಿದೆ.
Mangalore Bus video viral, police book case on woman for carelessness while crossing road. The presence of mind of the Bus Driver saved the life of woman crossing the road. The police have also seized the bus and booked a case against the Bus Driver too.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm