ಬ್ರೇಕಿಂಗ್ ನ್ಯೂಸ್
02-11-20 11:01 am Mangalore Correspondent ಕರಾವಳಿ
ಉಳ್ಳಾಲ, ನವೆಂಬರ್ 02: ನಾವು ಯಾವುದೇ ಭಾಷಾ ವಿರೋಧಿಗಳಲ್ಲ. ಎಲ್ಲ ಭಾಷೆಗಳನ್ನು ಗೌರವಿಸುವವರು. ಆದರೆ ಕನ್ನಡ ಸಂಸ್ಕೃತಿಯನ್ನು ಅಳಿಸುವ ಪ್ರಯತ್ನ ಸಹಿಸಲು ಅಸಾಧ್ಯ ಎಂದು ಮಂಗಳೂರು ಹರಿಕಥಾ ಪರಿಷತ್ ನ ಅಧ್ಯಕ್ಷರಾದ ಕೆ. ಮಹಾಬಲ ಶೆಟ್ಟಿ ಅಭಿಪ್ರಾಯಪಟ್ಟರು. ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ) ವತಿಯಿಂದ ತೊಕ್ಕೊಟ್ಟಿನ ಖಾಸಗಿ ಸಭಾಂಗಣದಲ್ಲಿ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ರಾಜ್ಯೋತ್ಸವದಂತಹ ಉತ್ಸವಗಳನ್ನು ಬಹಳ ಉತ್ಸಾಹದಿಂದ ಆಚರಿಸುವಂತಾಗಬೇಕು. ಕರ್ನಾಟಕದ ಅವಿಭಾಜ್ಯ ಅಂಗ ಕಾಸರಗೋಡು. ಅದು ಪುನಶ್ಚೇತನಗೊಂಡು ನಮ್ಮೊಂದಿಗೆ ಸೇರುವ ಅವಶ್ಯಕತೆ ಇದೆ. ಆಂಗ್ಲ ಭಾಷೆಯನ್ನು ಕನ್ನಡದೊಂದಿಗೆ ಮಿಶ್ರಣಗೊಳಿಸಿ ಸಂಸ್ಕೃತಿ ನಾಶಗೊಳಿಸಲಾಗುತ್ತಿದೆ. ಸಂಬಂಧ ಪಟ್ಟ ಇಲಾಖೆಗಳು ಇದನ್ನು ಸರಿಪಡಿಸಲು ಪ್ರಯತ್ನಿಸಿದರೂ ಆ ಪ್ರಯತ್ನಗಳು ಸಂಪೂರ್ಣಗೊಳ್ಳಲಿಲ್ಲ. ಕನ್ನಡದ ಉದ್ದಾರ, ಸಾಹಿತ್ಯ , ಸಂಸ್ಕೃತಿ ಅನುಷ್ಠಾನಕ್ಕಾಗಿ ದುಡಿಯುವ ಹೊಣೆಗಾರಿಕೆ ಮಂದಿನ ಯುವಪೀಳಿಗೆಯದ್ದು ಎಂದರು.

ನಿವೃತ್ತ ಶಿಕ್ಷಕರಾದ ವಾಸುದೇವರಾವ್ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ನಿವೃತ್ತ ಮುಖ್ಯ ಶಿಕ್ಷಕರಾದ ರತ್ನಾವತಿ ಜೆ ಬೈಕಾಡಿ, ನಿವೃತ್ತ ಅಂಗನವಾಡಿ ಶಿಕ್ಷಕಿ ಶಶಿಕಲಾ ಗಟ್ಟಿ, ನಿವೃತ್ತ ಪ್ರಾಚಾರ್ಯರಾದ ಲಲಿತಾ ಕೆ ಆಚಾರ್ ಅವರನ್ನು ಸನ್ಮಾನಿಸಲಾಯಿತು.
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ್, ಉತ್ಸವ ಸಮಿತಿ ಸ್ವಾಗತಾಧ್ಯಕ್ಷ ಮಾಜಿ ಶಾಸಕ ಕೆ ಜಯರಾಮ ಶೆಟ್ಟಿ, ಗೌರವ ಉಪಾಧ್ಯಕ್ಷರಾದ ಸದಾನಂದ ಬಂಗೇರ, ಹೈದರ್ ಪರ್ತಿಪ್ಪಾಡಿ, ಕೋಶಾಧಿಕಾರಿ ಆನಂದ ಕೆ ಅಸೈಗೋಳಿ, ದ.ಕ. ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಕೆ.ಎಂ.ಕೆ ಮಂಜನಾಡಿ, ಅಬ್ದುಲ್ ಅಜೀಜ್ ಹಕ್ ಮೊದಲಾದವರು ಇದ್ದರು.
Need to take efforts to save Kannada culture and language stated Harikata Parishath President Mahabala Shetty on the occasion of kannada rajyotsava 2020 function held at Ullal.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm