ಬ್ರೇಕಿಂಗ್ ನ್ಯೂಸ್
23-06-23 09:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ನಾಗರ ಹಾವಿನ ಹೊಟ್ಟೆಯೊಳಗೆ ಸೇರಿದ್ದ ಪ್ಲಾಸ್ಟಿಕ್ ಡಬ್ಬ ಒಂದನ್ನು ಮಂಗಳೂರಿನ ಪಶು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಬಂಟ್ವಾಳದ ವಗ್ಗದ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದಲ್ಲಿ ಬಿಲವೊಂದರಲ್ಲಿ ಸಿಲುಕಿದ್ದ ನಾಗರಹಾವಿನ ಬಗ್ಗೆ ಸ್ಥಳೀಯ ಗ್ರಾಪಂ ಉಪಾಧ್ಯಕ್ಷೆ ವಸಂತಿ ಅವರು ಹಾವು ಹಿಡಿಯುವ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು. ಮೂರು ದಿನಗಳಿಂದ ಅದನ್ನು ಗಮನಿಸುತ್ತಿದ್ದ ವಸಂತಿ ಮನೆಯವರು ಕೊನೆಗೆ ಅದರ ರಕ್ಷಣೆಗೆ ಮುಂದಾಗಿದ್ದರು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ಬಿಲದಿಂದ ಹೊರ ತೆಗೆದು ರಕ್ಷಿಸಿದ್ದಾರೆ. ಈ ವೇಳೆ ಅದರ ತಲೆಯ ಭಾಗದಲ್ಲಿ ಗಾಯಗಳಾಗಿದ್ದರಿಂದ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ನಾರಾವಿ ಅವರಲ್ಲಿಗೆ ತಂದಿದ್ದರು.
ಗಾಯಕ್ಕೆ ಚಿಕಿತ್ಸೆ ಒದಗಿಸಿದ ವೈದ್ಯರು ಹಾವಿನ ಹೊಟ್ಟೆ ಉಬ್ಬೇರಿದ್ದನ್ನು ಗಮನಿಸಿ ಎಕ್ಸ್ ರೇ ಮಾಡಿದ್ದರು. ಆಗ ಹಾವಿನ ಉದರದೊಳಗೆ ಪ್ಲಾಸ್ಟಿಕ್ ವಸ್ತು ಇರುವುದು ಗಮನಕ್ಕೆ ಬಂದಿತ್ತು. ಹಾಗಾಗಿ ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಉದರದಲ್ಲಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಹೊರತೆಗೆದಿದ್ದಾರೆ.
ವೈದ್ಯರ ಪ್ರಕಾರ 'ಸುಮಾರು ಐದು ಅಡಿ ಉದ್ದದ ಹೆಣ್ಣು ನಾಗರಹಾವು ಇದಾಗಿತ್ತು. 10 ವರ್ಷ ಪ್ರಾಯ ಆಗಿರಬಹುದು. ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಿ ಯಾವುದೇ ತೊಂದರೆ ಇಲ್ಲವೆಂದು ಕಂಡ ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಮತ್ತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.
Plastic Box Swallowed by snake Naja Naja Removed through Surgery by 4 Vets doctors in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm