ಬ್ರೇಕಿಂಗ್ ನ್ಯೂಸ್
23-06-23 09:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ನಾಗರ ಹಾವಿನ ಹೊಟ್ಟೆಯೊಳಗೆ ಸೇರಿದ್ದ ಪ್ಲಾಸ್ಟಿಕ್ ಡಬ್ಬ ಒಂದನ್ನು ಮಂಗಳೂರಿನ ಪಶು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಬಂಟ್ವಾಳದ ವಗ್ಗದ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದಲ್ಲಿ ಬಿಲವೊಂದರಲ್ಲಿ ಸಿಲುಕಿದ್ದ ನಾಗರಹಾವಿನ ಬಗ್ಗೆ ಸ್ಥಳೀಯ ಗ್ರಾಪಂ ಉಪಾಧ್ಯಕ್ಷೆ ವಸಂತಿ ಅವರು ಹಾವು ಹಿಡಿಯುವ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು. ಮೂರು ದಿನಗಳಿಂದ ಅದನ್ನು ಗಮನಿಸುತ್ತಿದ್ದ ವಸಂತಿ ಮನೆಯವರು ಕೊನೆಗೆ ಅದರ ರಕ್ಷಣೆಗೆ ಮುಂದಾಗಿದ್ದರು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ಬಿಲದಿಂದ ಹೊರ ತೆಗೆದು ರಕ್ಷಿಸಿದ್ದಾರೆ. ಈ ವೇಳೆ ಅದರ ತಲೆಯ ಭಾಗದಲ್ಲಿ ಗಾಯಗಳಾಗಿದ್ದರಿಂದ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ನಾರಾವಿ ಅವರಲ್ಲಿಗೆ ತಂದಿದ್ದರು.
ಗಾಯಕ್ಕೆ ಚಿಕಿತ್ಸೆ ಒದಗಿಸಿದ ವೈದ್ಯರು ಹಾವಿನ ಹೊಟ್ಟೆ ಉಬ್ಬೇರಿದ್ದನ್ನು ಗಮನಿಸಿ ಎಕ್ಸ್ ರೇ ಮಾಡಿದ್ದರು. ಆಗ ಹಾವಿನ ಉದರದೊಳಗೆ ಪ್ಲಾಸ್ಟಿಕ್ ವಸ್ತು ಇರುವುದು ಗಮನಕ್ಕೆ ಬಂದಿತ್ತು. ಹಾಗಾಗಿ ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಉದರದಲ್ಲಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಹೊರತೆಗೆದಿದ್ದಾರೆ.
ವೈದ್ಯರ ಪ್ರಕಾರ 'ಸುಮಾರು ಐದು ಅಡಿ ಉದ್ದದ ಹೆಣ್ಣು ನಾಗರಹಾವು ಇದಾಗಿತ್ತು. 10 ವರ್ಷ ಪ್ರಾಯ ಆಗಿರಬಹುದು. ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಿ ಯಾವುದೇ ತೊಂದರೆ ಇಲ್ಲವೆಂದು ಕಂಡ ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಮತ್ತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.
Plastic Box Swallowed by snake Naja Naja Removed through Surgery by 4 Vets doctors in Mangalore.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm