ಬ್ರೇಕಿಂಗ್ ನ್ಯೂಸ್
23-06-23 09:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ನಾಗರ ಹಾವಿನ ಹೊಟ್ಟೆಯೊಳಗೆ ಸೇರಿದ್ದ ಪ್ಲಾಸ್ಟಿಕ್ ಡಬ್ಬ ಒಂದನ್ನು ಮಂಗಳೂರಿನ ಪಶು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಬಂಟ್ವಾಳದ ವಗ್ಗದ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದಲ್ಲಿ ಬಿಲವೊಂದರಲ್ಲಿ ಸಿಲುಕಿದ್ದ ನಾಗರಹಾವಿನ ಬಗ್ಗೆ ಸ್ಥಳೀಯ ಗ್ರಾಪಂ ಉಪಾಧ್ಯಕ್ಷೆ ವಸಂತಿ ಅವರು ಹಾವು ಹಿಡಿಯುವ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು. ಮೂರು ದಿನಗಳಿಂದ ಅದನ್ನು ಗಮನಿಸುತ್ತಿದ್ದ ವಸಂತಿ ಮನೆಯವರು ಕೊನೆಗೆ ಅದರ ರಕ್ಷಣೆಗೆ ಮುಂದಾಗಿದ್ದರು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ಬಿಲದಿಂದ ಹೊರ ತೆಗೆದು ರಕ್ಷಿಸಿದ್ದಾರೆ. ಈ ವೇಳೆ ಅದರ ತಲೆಯ ಭಾಗದಲ್ಲಿ ಗಾಯಗಳಾಗಿದ್ದರಿಂದ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ನಾರಾವಿ ಅವರಲ್ಲಿಗೆ ತಂದಿದ್ದರು.
ಗಾಯಕ್ಕೆ ಚಿಕಿತ್ಸೆ ಒದಗಿಸಿದ ವೈದ್ಯರು ಹಾವಿನ ಹೊಟ್ಟೆ ಉಬ್ಬೇರಿದ್ದನ್ನು ಗಮನಿಸಿ ಎಕ್ಸ್ ರೇ ಮಾಡಿದ್ದರು. ಆಗ ಹಾವಿನ ಉದರದೊಳಗೆ ಪ್ಲಾಸ್ಟಿಕ್ ವಸ್ತು ಇರುವುದು ಗಮನಕ್ಕೆ ಬಂದಿತ್ತು. ಹಾಗಾಗಿ ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಉದರದಲ್ಲಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಹೊರತೆಗೆದಿದ್ದಾರೆ.
ವೈದ್ಯರ ಪ್ರಕಾರ 'ಸುಮಾರು ಐದು ಅಡಿ ಉದ್ದದ ಹೆಣ್ಣು ನಾಗರಹಾವು ಇದಾಗಿತ್ತು. 10 ವರ್ಷ ಪ್ರಾಯ ಆಗಿರಬಹುದು. ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಿ ಯಾವುದೇ ತೊಂದರೆ ಇಲ್ಲವೆಂದು ಕಂಡ ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಮತ್ತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.
Plastic Box Swallowed by snake Naja Naja Removed through Surgery by 4 Vets doctors in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm