ಬ್ರೇಕಿಂಗ್ ನ್ಯೂಸ್
24-06-23 10:35 pm Mangalore Correspondent ಕರಾವಳಿ
ಮಂಗಳೂರು, ಜೂನ್ 24: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪೊಲೀಸ್ ಕಮಿಷನರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠರನ್ನು ಕರೆದು ಮಾತುಕತೆ ನಡೆಸಿದ ಬೆನ್ನಲ್ಲೇ ಪೊಲೀಸರು ಮಂಗಳೂರು ನಗರ ವ್ಯಾಪ್ತಿಯಲ್ಲಿ ಶನಿವಾರ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ.
ಶನಿವಾರ ಒಂದೇ ದಿನ ಮಂಗಳೂರು ನಗರ ವ್ಯಾಪ್ತಿಯ ಶಾಲೆ ಮತ್ತು ಕಾಲೇಜು ಪರಿಸರದಲ್ಲಿ ವಿವಿಧ ರೀತಿಯ ಅಂಗಡಿಗಳಿಗೆ ಪೊಲೀಸರು ದಾಳಿ ನಡೆಸಿದ್ದು, 348 ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, 153 ಅಂಗಡಿಗಳಲ್ಲಿ ಗುಟ್ಕಾ ಮತ್ತು ಸಿಗರೇಟ್ ಪತ್ತೆಯಾಗಿದ್ದು, ಅಂತಹ ಅಂಗಡಿಗಳಿಗೆ ತಲಾ 200 ರೂ. ದಂಡ ವಿಧಿಸಿದ್ದಾರೆ. ಅಲ್ಲದೆ, ಕೋಟ್ಪಾ ಕಾಯ್ದೆಯಡಿ ಅಂಗಡಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ.



ಜೂನ್ 23ರ ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪೊಲೀಸ್ ಅಧಿಕಾರಿಗಳನ್ನು ಕರೆದು ಸಭೆ ನಡೆಸಿದ್ದರು. ಮಾದಕ ದ್ರವ್ಯ ಬಳಕೆ, ಅನೈತಿಕ ಪೊಲೀಸ್ ಗಿರಿ ಮತ್ತು ಗೂಂಡಾಗಿರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಮಾದಕ ದ್ರವ್ಯ ಬಳಕೆಯನ್ನು ತಡೆಯಲು ಪೊಲೀಸ್ ಇಲಾಖೆ ಶೈಕ್ಷಣಿಕ ಸಂಸ್ಥೆಗಳು ಮತ್ತು ಜಿಲ್ಲಾಡಳಿತದ ಜೊತೆ ಸೇರಿ ಕಾರ್ಯಾಚರಣೆ ನಡೆಸಲು ಸಚಿವರು ಸೂಚಿಸಿದ್ದರು. ಅಲ್ಲದೆ, ಈ ಜಾಲದಲ್ಲಿ ಪೊಲೀಸ್ ಇಲಾಖೆಯ ಕೆಳ ಹಂತದ ಸಿಬಂದಿ ಕೈಜೋಡಿಸಿರುವುದು ನನ್ನ ಗಮನಕ್ಕೆ ಬಂದಿದ್ದು, ಅಂತಹ ಸಿಬಂದಿ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು.

ಅನೈತಿಕ ಪೊಲೀಸ್ ಗಿರಿಯನ್ನು ತಡೆಯಲು ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಸಮಾಜದ ಯಾವುದೇ ಶಕ್ತಿಯಾಗಲಿ ಕಾನೂನು ಕೈಗೆತ್ತಿಕೊಂಡಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಮತ್ತು ಕ್ಷೇತ್ರದ ಇತರ ನಾಯಕರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಡುವಲ್ಲಿ ಮತ್ತು ಸಾಮರಸ್ಯ ಕದಡುವುದಕ್ಕೆ ಮಾದಕ ದ್ರವ್ಯ ಬಳಕೆ, ಅನೈತಿಕ ಪೊಲೀಸ್ ಗಿರಿಯೇ ಕಾರಣ ಎಂಬುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
348 shops, establishments raided by Mangalore Police, 153 shops with cigarettes and Gutka found. In a special and mass drive against use of Cigarettes and Gutka in vincity of school and colleges, across city totally 348 shops, establishments were searched and found 153 shops with cigarettes or Gutka or both. We have booked all of them under COTPA - Cigarettes and Other Tobacco Products Act and all are fined with Rs 200 reach and been given warning of not to do so.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm