ಬ್ರೇಕಿಂಗ್ ನ್ಯೂಸ್
28-06-23 02:14 pm Mangalore Correspondent ಕರಾವಳಿ
ಮಂಗಳೂರು, ಜೂನ್ 28: ನಗರದ ಹಂಪನಕಟ್ಟೆ ಮಂಗಳೂರು ವಿವಿ ಕಾಲೇಜಿನಲ್ಲಿ ಕಾರ್ಯಕ್ರಮದಲ್ಲಿ ಕೊನೆಗೂ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಭಾಗವಹಿಸಿದ್ದಾರೆ. ಹಿಂದು ಮುಖಂಡನಿಗೆ ಆತಿಥ್ಯ ನೀಡಿದ್ದ ಬಗ್ಗೆ ಎನ್ಎಸ್ ಯುಐ ಕಡೆಯಿಂದ ವಿರೋಧ ಕೇಳಿಬಂದರೂ ಮಂಗಳವಾರ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಸದ್ದಿಲ್ಲದೆ ಬಂದು ಹೋಗಿದ್ದಾರೆ.
ಮಂಗಳೂರಿನ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಜೂ.23ರಂದು ಪ್ರತಿಭಾ ದಿನಾಚರಣೆ ಹಾಗೂ ಜೂ.24ರಂದು ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಪ್ರತಿಭಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಗೆ ಹಿಂದು ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರನ್ನು ಆಹ್ವಾನಿಸಿದ್ದಕ್ಕೆ ಎನ್ಎಸ್ಯುಐ ವಿರೋಧ ವ್ಯಕ್ತಪಡಿಸಿತ್ತು. ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಲ್ಲದೆ, ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿತ್ತು. ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಕಾಲೇಜು ಆಡಳಿತವು ಎರಡೂ ಕಾರ್ಯಕ್ರಮಗಳನ್ನು ಮುಂದೂಡಿಕೆ ಮಾಡಿತ್ತು. ಕಾಲೇಜಿನ ಎಬಿವಿಪಿ ನೇತೃತ್ವದ ವಿದ್ಯಾರ್ಥಿ ಸಂಘದಿಂದ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಎನ್ಎಸ್ ಯುಐ ವಿದ್ಯಾರ್ಥಿಗಳು ಶ್ರೀಕಾಂತ್ ಶೆಟ್ಟಿಯನ್ನು ಕರೆಸಿದರೆ, ಕಾಲೇಜಿನಲ್ಲಿ ಕೋಮು ಭಾವನೆ ಕೆರಳಲು ಕಾರಣವಾಗುತ್ತೆ ಎಂದು ಆರೋಪಿಸಿತ್ತು.



ಮುಂದೂಡಿದ್ದ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಮಂಗಳವಾರ ನಡೆಸಲಾಗಿದೆ. ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಭಾಗಿಯಾಗಿ ಭಾಷಣ ಮಾಡಿದ್ದಾರೆ. ಶಾಂತಿಯುತವಾಗಿ ಕಾರ್ಯಕ್ರಮ ಮುಕ್ತಾಯವಾಗಿದ್ದು ವಿರೋಧ ವ್ಯಕ್ತಪಡಿಸಿದ್ದವರಿಗೆ ಶ್ರೀಕಾಂತ್ ಶೆಟ್ಟಿ ಬಂದು ಭಾಷಣ ಮಾಡಿ ಹೋಗಿದ್ದೇ ಗೊತ್ತಿಲ್ಲ. ಕೋಮು ಪ್ರಚೋದನೆ ಭಾಷಣ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಹೇಳಿದ್ದರು. ಕಾರ್ಯಕ್ರಮಕ್ಕೆ ಪೊಲೀಸರು ಭದ್ರತೆಯನ್ನೂ ನೀಡಿದ್ದರು.
Hindu Activist Shrikanth Shetty attends program at Mangalore University organised by ABVP amid NSIU Congress filing complaint to Police and Administration to stop the program as he would deliver hate speech.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm