ಬ್ರೇಕಿಂಗ್ ನ್ಯೂಸ್
28-06-23 02:14 pm Mangalore Correspondent ಕರಾವಳಿ
ಮಂಗಳೂರು, ಜೂನ್ 28: ನಗರದ ಹಂಪನಕಟ್ಟೆ ಮಂಗಳೂರು ವಿವಿ ಕಾಲೇಜಿನಲ್ಲಿ ಕಾರ್ಯಕ್ರಮದಲ್ಲಿ ಕೊನೆಗೂ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಭಾಗವಹಿಸಿದ್ದಾರೆ. ಹಿಂದು ಮುಖಂಡನಿಗೆ ಆತಿಥ್ಯ ನೀಡಿದ್ದ ಬಗ್ಗೆ ಎನ್ಎಸ್ ಯುಐ ಕಡೆಯಿಂದ ವಿರೋಧ ಕೇಳಿಬಂದರೂ ಮಂಗಳವಾರ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಸದ್ದಿಲ್ಲದೆ ಬಂದು ಹೋಗಿದ್ದಾರೆ.
ಮಂಗಳೂರಿನ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಜೂ.23ರಂದು ಪ್ರತಿಭಾ ದಿನಾಚರಣೆ ಹಾಗೂ ಜೂ.24ರಂದು ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಪ್ರತಿಭಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಗೆ ಹಿಂದು ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರನ್ನು ಆಹ್ವಾನಿಸಿದ್ದಕ್ಕೆ ಎನ್ಎಸ್ಯುಐ ವಿರೋಧ ವ್ಯಕ್ತಪಡಿಸಿತ್ತು. ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಲ್ಲದೆ, ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿತ್ತು. ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಕಾಲೇಜು ಆಡಳಿತವು ಎರಡೂ ಕಾರ್ಯಕ್ರಮಗಳನ್ನು ಮುಂದೂಡಿಕೆ ಮಾಡಿತ್ತು. ಕಾಲೇಜಿನ ಎಬಿವಿಪಿ ನೇತೃತ್ವದ ವಿದ್ಯಾರ್ಥಿ ಸಂಘದಿಂದ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಎನ್ಎಸ್ ಯುಐ ವಿದ್ಯಾರ್ಥಿಗಳು ಶ್ರೀಕಾಂತ್ ಶೆಟ್ಟಿಯನ್ನು ಕರೆಸಿದರೆ, ಕಾಲೇಜಿನಲ್ಲಿ ಕೋಮು ಭಾವನೆ ಕೆರಳಲು ಕಾರಣವಾಗುತ್ತೆ ಎಂದು ಆರೋಪಿಸಿತ್ತು.
ಮುಂದೂಡಿದ್ದ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಮಂಗಳವಾರ ನಡೆಸಲಾಗಿದೆ. ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಭಾಗಿಯಾಗಿ ಭಾಷಣ ಮಾಡಿದ್ದಾರೆ. ಶಾಂತಿಯುತವಾಗಿ ಕಾರ್ಯಕ್ರಮ ಮುಕ್ತಾಯವಾಗಿದ್ದು ವಿರೋಧ ವ್ಯಕ್ತಪಡಿಸಿದ್ದವರಿಗೆ ಶ್ರೀಕಾಂತ್ ಶೆಟ್ಟಿ ಬಂದು ಭಾಷಣ ಮಾಡಿ ಹೋಗಿದ್ದೇ ಗೊತ್ತಿಲ್ಲ. ಕೋಮು ಪ್ರಚೋದನೆ ಭಾಷಣ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಹೇಳಿದ್ದರು. ಕಾರ್ಯಕ್ರಮಕ್ಕೆ ಪೊಲೀಸರು ಭದ್ರತೆಯನ್ನೂ ನೀಡಿದ್ದರು.
Hindu Activist Shrikanth Shetty attends program at Mangalore University organised by ABVP amid NSIU Congress filing complaint to Police and Administration to stop the program as he would deliver hate speech.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm