ಬ್ರೇಕಿಂಗ್ ನ್ಯೂಸ್
29-06-23 04:23 pm Mangalore Correspondent ಕರಾವಳಿ
ಮಂಗಳೂರು, ಜೂನ್ 29: ಪದವಿ ಕಲಿತ ಯುವಕರಿಗೆ ರಾಜಕೀಯ ಕ್ಷೇತ್ರದ ಬಗ್ಗೆ ತಿಳಿದುಕೊಳ್ಳಲು ಸೂಕ್ತ ತರಬೇತಿ ಕೇಂದ್ರಗಳು ಇಲ್ಲ. ಹಾಗಾಗಿ ರಾಜಕೀಯ ಕ್ಷೇತ್ರದ ತರಬೇತಿ ಸಂಸ್ಥೆ ಪ್ರಾರಂಭಿಸುವ ಯೋಜನೆ ಇದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈ ಯೋಜನೆ ಜಾರಿ ಮಾಡಲಿದ್ದೇವೆ. ಸದ್ಯ ಪುಣೆಯಲ್ಲಿ ಮಾತ್ರ ಈ ರೀತಿಯ ತರಬೇತಿ ಸಂಸ್ಥೆ ಇದೆ, ಅವರ ಜೊತೆ ಚರ್ಚಿಸಿ ಒಂದು ವರ್ಷದ ಕೋರ್ಸ್ ಆರಂಭಿಸಲಿದ್ದೇವೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಅರಿವು, ರಾಜಕೀಯ, ಸರಕಾರಿ ವ್ಯವಸ್ಥೆ ಬಗ್ಗೆ ಅರಿವು ಮೂಡಿಸುವ ಉದ್ದೇಶ ಮತ್ತು ಆಸಕ್ತರಿಗೆ ತರಬೇತಿ ನೀಡುವ ಉದ್ದೇಶದಿಂದ ಸಂಸ್ಥೆ ಆರಂಭಿಸಲಾಗುವುದು. ಪದವಿ ಮುಗಿಸಿದವರು ಆರು ತಿಂಗಳು ತರಬೇತಿ, ನಂತರದ ಆರು ತಿಂಗಳು ಇಂಟರ್ನ್ ಶಿಪ್ ಪಡೆಯಲು ಅವಕಾಶ ಇರುತ್ತದೆ. ಕೇವಲ ಎಂಎಲ್ ಎ, ಎಂಪಿ ಆಗೋದಷ್ಟೇ ಮುಖ್ಯ ಅಲ್ಲ. ರಾಜಕೀಯ ಕ್ಷೇತ್ರಕ್ಕೆ ಬರುವವರು ಮೊದಲಾಗಿ ಈ ತರಬೇತಿ ಪಡೆದಲ್ಲಿ ಸುಲಭವಾಗಿ ಮೇಲಕ್ಕೇರಲು ಸಾಧ್ಯವಾಗುತ್ತದೆ.
ನಾವು ರಾಜಕೀಯಕ್ಕೆ ಬರುವಾಗ ಇಂತಹ ತರಬೇತಿಗೆ ಅವಕಾಶ ಇರಲಿಲ್ಲ. ಇಂತಹ ತರಬೇತಿ ಪಡೆದಲ್ಲಿ ಸರ್ಕಾರೇತರ ಎನ್ ಜಿಓ ಸಂಸ್ಥೆ ಆರಂಭಿಸಬಹುದು. ಸರ್ಕಾರಿ ನೌಕರನಾಗಿ ಸೇರಬಹುದು. ಶಾಸಕರ ಜೊತೆಗೆ ಕೆಲಸ ಮಾಡಬಹುದು. ಮುಂದಿನ ದಿನಗಳಲ್ಲಿ ಇದರಿಂದ ಬಹಳಷ್ಟು ಪ್ರಯೋಜನ ಸಿಗಲಿದೆ ಎಂದು ಹೇಳಿದ ಖಾದರ್, ರಾಜ್ಯದ ಪ್ರಮುಖ ಕೇಂದ್ರದಲ್ಲೇ ಸಂಸ್ಥೆಯನ್ನು ಸ್ಥಾಪಿಸಲಾಗುವುದು. ಇದಕ್ಕೆ ಸಿಲೇಬಸ್ ಇರಲಿದೆ, ಫುಲ್ ಟೈಮ್ ಉಪನ್ಯಾಸಕರು ಇರ್ತಾರೆ. ಮಧ್ಯೆ ರಾಜಕೀಯ ನಾಯಕರು, ಮುತ್ಸದ್ದಿಗಳು ಬಂದು ತರಬೇತಿ ಕೊಡ್ತಾರೆ. ತರಬೇತಿ ಪಡೆದವರು ಮುಂದೆ ಒಳ್ಳೆಯ ನಾಯಕನಾಗಲು ಅವಕಾಶ ಇರುತ್ತದೆ ಎಂದು ಹೇಳಿದರು.
“Youth who have completed degree courses and are interested in politics will be trained through a one-year course at Karnataka Political Training Institute”, said the Speaker of Karnataka Legislative Assembly U T Khader during a press meet held at the Eden Club here, on June 29.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm