ಬ್ರೇಕಿಂಗ್ ನ್ಯೂಸ್
30-06-23 03:31 pm Mangalore Correspondent ಕರಾವಳಿ
ಮಂಗಳೂರು, ಜೂನ್ 30: ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಕರಾವಳಿ ಭಾಗದ ವಿವಿಧ ಮಠಗಳ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.
ನಗರದ ಬಾಳಂ ಭಟ್ ಸಭಾಂಗಣದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು ಆರೆಸ್ಸೆಸ್ ಮತ್ತು ವಿಶ್ವ ಹಿಂದು ಪರಿಷತ್ತಿನ ಪ್ರಮುಖರ ಜೊತೆ ಕುಳಿತು ಸಮಾವೇಶ ನಡೆಸಿದ್ದಾರೆ. ಪ್ರಸ್ತಾವಿತ ಮಸೂದೆಗಳನ್ನು ಹಿಂಪಡೆದಲ್ಲಿ ಏನು ಮಾಡಬೇಕು ಅನ್ನುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯ ಬಳಿಕ ಸ್ವಾಮೀಜಿಗಳು ಸುದ್ದಿಗೋಷ್ಟಿ ಕರೆದು ಮಾಹಿತಿ ಹಂಚಿಕೊಂಡಿದ್ದಾರೆ.
ಒಡಿಯೂರು ಮಠದ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ನಾವು ಗೋಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಬಾರದು ಎಂಬ ಬಗ್ಗೆ ನಿರ್ಣಯ ಮಾಡಿದ್ದೇವೆ. ಈ ಕಾಯ್ದೆಯನ್ನು ವಾಪಸ್ ಪಡೆದಲ್ಲಿ ಸಮಾಜದಲ್ಲಿ ಅಶಾಂತಿ ಮೂಡಬಹುದು. 2020ರ ಗೋಹತ್ಯೆ ನಿಷೇಧ ಕಾಯ್ದೆಯ ನಿಯಮಾವಳಿಗಳಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಈ ರೀತಿ ಮಾಡಿದರೆ, ಹಿಂದು ಸಮಾಜದ ವಿರುದ್ಧ ನಿರ್ಣಯ ಕೈಗೊಂಡಂತೆ. ನಮ್ಮ ಮನವಿ ಒಪ್ಪದೆ ಕಾಯ್ದೆ ವಾಪಸ್ ಪಡೆದರೆ ಸಾಧು ಸಂತರು ಸೇರಿ ಉಪವಾಸ ಸತ್ಯಾಗ್ರಹ ಮಾಡುವುದಕ್ಕೂ ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

ಮಸೂದೆ ವಿಚಾರದಲ್ಲಿ ನಾವು ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವರು, ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಕೊಡಲಿದ್ದೇವೆ. ಅಲ್ಲದೆ, ಕೇಂದ್ರ ಗೃಹ ಸಚಿವರು, ಪ್ರಧಾನಿ ಅವರನ್ನೂ ಭೇಟಿ ಮಾಡುತ್ತೇವೆ. ಸದ್ಯಕ್ಕೆ ಸೆಪ್ಟಂಬರ್ ವರೆಗೆ ಚಾತುರ್ಮಾಸ್ಯ ವೃತ ಇರುತ್ತದೆ. ಆನಂತರ, ಈ ಕೆಲಸಕ್ಕೆ ಮುಂದಾಗುತ್ತೇವೆ ಎಂದು ಗುರುಪುರ ಮಠದ ವಜ್ರದೇಹಿ ಸ್ವಾಮೀಜಿ ಹೇಳಿದರು. ಉತ್ತರ ಕರ್ನಾಟಕದ ಲಿಂಗಾಯತ, ಒಕ್ಕಲಿಗರ ಸ್ವಾಮೀಜಿಗಳ ಬೆಂಬಲ ಪಡೆಯುತ್ತೀರಾ ಎಂಬ ಪ್ರಶ್ನೆಗೆ, ಈಗ ಕರಾವಳಿ ಭಾಗದ ಸ್ವಾಮೀಜಿಗಳು ಸೇರಿದ್ದೇವೆ. ಮುಂದಿನ ದಿನಗಳಲ್ಲಿ ಆ ಕುರಿತು ಚಿಂತನೆ ನಡೆಸುತ್ತೇವೆ ಎಂದರು.
ಮಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಆಂಟಿ ಕಮ್ಯುನಲ್ ವಿಂಗ್ ರಚಿಸಿರುವ ಬಗ್ಗೆ ಆಕ್ಷೇಪಿಸಿದ ಗುರುಪುರ ಸ್ವಾಮೀಜಿ, ಈ ವಿಂಗ್ ನಿಂದ ಲವ್ ಜಿಹಾದ್ ವಿರುದ್ಧ ಕ್ರಮ ಆಗಬಹುದು ಎಂದುಕೊಂಡಿದ್ದೆವು. ಆದರೆ, ಈಗ ಲವ್ ಜಿಹಾದ್ ಪತ್ತೆ ಮಾಡಿದವರ ವಿರುದ್ಧವೇ ಕೇಸು ದಾಖಲಿಸುತ್ತಿದ್ದಾರೆ. ಹಿಂದು ಸಂಘಟನೆಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ, ಗಡೀಪಾರು ಮಾಡುವ ಕೆಲಸ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಹೀಗಾದಲ್ಲಿ ನಾವು ಸುಮ್ಮನಿರುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು. ಸಭೆಯಲ್ಲಿ ಮಾಣಿಲ ಮಠದ ಸ್ವಾಮೀಜಿ, ಕೇಮಾರು ಸ್ವಾಮೀಜಿ ಸೇರಿ 12ಕ್ಕೂ ಹೆಚ್ಚು ಕಡೆಯ ಸ್ವಾಮೀಜಿಗಳು ಇದ್ದರು. ಆರೆಸ್ಸೆಸ್ ಪ್ರಮುಖ ಪ್ರಕಾಶ್ ಪಿ.ಎಸ್, ವಿಹಿಂಪ ಮುಖಂಡ ಎಂ.ಬಿ.ಪುರಾಣಿಕ್, ಶರಣ್ ಪಂಪ್ವೆಲ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.
Anti conversion law, anti-cow slaughter law bill should not be cancelled by Congress warns various Hindu Swamiji in Mangalore.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am