ಬ್ರೇಕಿಂಗ್ ನ್ಯೂಸ್
03-07-23 05:55 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಮಂಗಳೂರು ನಗರದಲ್ಲಿ ಭಾರೀ ಮಳೆಯಾಗಿದ್ದು ರಸ್ತೆಗಳಲ್ಲಿ ಮಳೆ ನೀರು ಶೇಖರಗೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಪಂಪ್ವೆಲ್ ಮೇಲ್ಸೇತುವೆ ಅಡಿಭಾಗದಲ್ಲಿ ನೀರು ತುಂಬಿಕೊಂಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
ಪಂಪ್ವೆಲ್ ಮೇಲ್ಸೇತುವೆಯಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ತೊಂದರೆ ಎದುರಾಗುತ್ತದೆ. ಮಂಗಳೂರು ನಗರಕ್ಕೆ ಎಂಟ್ರಿ ಕೊಡುವ ಜಾಗದಲ್ಲೇ ನಾಲ್ಕು ಕಡೆಯಿಂದ ಸೇರುವ ಮಳೆನೀರು ಕಾಲುವೆಯಲ್ಲಿ ಹರಿಯಲು ಸಾಧ್ಯವಾಗದೆ ರಸ್ತೆಗೆ ಬಂದು ನಿಂತಿದೆ. ಸೇತುವೆ ಅಡಿಭಾಗದಲ್ಲಿ ಭಾರೀ ಪ್ರಮಾಣದ ನೀರು ನಿಂತಿದ್ದು ವಾಹನಗಳು ಅತ್ತಿತ್ತ ಸಾಗಲು ಸಾಧ್ಯವಾಗದೆ ಸಿಕ್ಕಿಬಿದ್ದಿವೆ.









ಸೋಮವಾರ ಮಧ್ಯಾಹ್ನ 3 ಗಂಟೆಯಿಂದ ಜಡಿಮಳೆ ಆಗಿದ್ದು ನಗರದ ಎಲ್ಲ ಕಡೆ ರಸ್ತೆಯಲ್ಲಿ ಪೂರ್ತಿ ನೀರು ತುಂಬಿಕೊಂಡಿದೆ. ಸಂಜೆಯ ವೇಳೆಗೆ, ಮಳೆನೀರು ಪಂಪ್ವೆಲ್ ಸೇತುವೆಯ ಅಡಿಭಾಗವನ್ನು ಆವರಿಸಿದ್ದು ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿವೆ. ಕೆಲವು ವಾಹನಗಳು ನೀರಿನಲ್ಲಿ ಸಾಗಲೆತ್ನಿಸಿ ಸಿಕ್ಕಿಬಿದ್ದಿವೆ. ಮಂಗಳೂರು ನಗರ ಭಾಗದಿಂದ ತಲಪಾಡಿ, ತೊಕ್ಕೊಟ್ಟು, ಬಿಸಿ ರೋಡ್ ಸಾಗುವ ಬಸ್, ಇನ್ನಿತರ ವಾಹನಗಳು ಸಿಕ್ಕಿಬಿದ್ದು ನೀರು ಇಳಿಯದೆ ಅಲ್ಲಿಂದ ಸಾಗುವಂತಿಲ್ಲ ಎನ್ನುವ ಸ್ಥಿತಿಗೆ ಒಳಗಾಗಿದೆ. ಸಾರ್ವಜನಿಕರು ಮೇಲ್ಸೇತುವೆಯ ಅವೈಜ್ಞಾನಿಕ ಕಾಮಗಾರಿಗೆ ಹಿಡಿಶಾಪ ಹಾಕಿದ್ದಾರೆ.
Rain in Mangalore, Pumpwell submerged with water, heavy traffic block due to incessant rains. The floodwater beneath the Pumpwell flyover has risen to knee height, blocking the route towards Mangaluru and vehicles heading to the city are stuck at the junction for hours.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm