ಬ್ರೇಕಿಂಗ್ ನ್ಯೂಸ್
02-11-20 10:02 pm Udupi Reporter ಕರಾವಳಿ
ಉಡುಪಿ, ನ. 2: ಶಿರಿಯಾರ ಗ್ರಾಪಂ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿನ ರೈಸ್ಮಿಲ್ ಒಂದಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಅನ್ನಭಾಗ್ಯ ಯೋಜನೆಯ 600ಕ್ಕೂ ಅಧಿಕ ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದೆ.
ಜಿಲ್ಲೆಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡುತ್ತಿರುವ ಕುರಿತು ಮಾಹಿತಿ ಸಂಗ್ರಹಿಸಿದ್ದ ಅಧಿಕಾರಿಗಳು, ದಾಳಿ ನಡೆಸಿದ್ದಾರೆ. ಈ ಅಕ್ಕಿಯನ್ನು ಮನೆ ಮನೆಗಳಿಂದ ಸಂಗ್ರಹಿಸಿ ತಂದು ಇಲ್ಲಿ ದಾಸ್ತಾನು ಇರಿಸಲಾಗಿತ್ತು. ಈ ಅಕ್ಕಿಯನ್ನು ಲಾರಿಗಳಿಗೆ ಲೋಡ್ ಮಾಡಿ ಹಾವೇರಿ ಸೇರಿದಂತೆ ಹೊರಜಿಲ್ಲೆಗಳಿಗೆ ಸಾಗಾಟ ಮಾಡಲು ಯತ್ನ ನಡೆದಿತ್ತು. ದಾಳಿ ವೇಳೆ ಮಿಲ್ ಮಾಲಕ ಪರಾರಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ವಶಪಡಿಸಿಕೊಂಡಿರುವ ಅಕ್ಕಿಯ ಒಟ್ಟು ಮೌಲ್ಯ 16.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಅಕ್ಕಿ ತುಂಬಲು ಬಂದಿದ್ದ ಮೂವರು ಲಾರಿ ಚಾಲಕರು ಮತ್ತು ಕ್ಲೀನರ್ ಸೇರಿದಂತೆ, 6 ಲಾರಿಗಳು, ಎರಡು 407 ಟೆಂಪೋ, ಒಂದು ಟಾಟಾ ಹಾಗೂ ಮಾರುತಿ ಇಕೋ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಉಡುಪಿ ಆಹಾರ ಇಲಾಖೆಯ ಉಪನಿರ್ದೇಶಕ ಗಜೇಂದ್ರ ವಿ., ಉಡುಪಿ ಆಹಾರ ನಿರೀಕ್ಷಕಿ ಪಾರ್ವತಿ, ಕುಂದಾಪುರ ನಿರೀಕ್ಷಕ ಸುರೇಶ್, ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಮೊದಲಾದವರು ಹಾಜರಿದ್ದರು.
ಬಡವರ ಅಕ್ಕಿ ಉಳ್ಳವರ ಪಾಲು !
ಜಿಲ್ಲೆಯಲ್ಲಿ ಪಡಿತರವನ್ನು ಅಕ್ರಮವಾಗಿ ದಾಸ್ತಾನು, ಮಾರಾಟ ಮಾಡುವ ಜಾಲ ಸಕ್ರಿಯವಾಗಿದ್ದು, ಕಳೆದ ತಿಂಗಳು ಕುಂದಾಪುರ ತಾಲೂಕಿನಲ್ಲಿ ಈ ಜಾಲವನ್ನು ಪತ್ತೆ ಮಾಡಲಾಗಿತ್ತು. ಈಗ ಅಕ್ಕಿಯನ್ನು ಮಾರಾಟ ಮಾಡುವ ಜಾಲ ಪತ್ತೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಪಡಿತರ ಅಕ್ಕಿಯ ಅಕ್ರಮ ದಾಸ್ತಾನು, ಸಾಗಾಟ ಕುರಿತು ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ತಿಳಿಸಬೇಕು. ಆಗ ಮಾತ್ರ ಇಂತಹ ಜಾಲದ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.
Officials on Monday November 2 seized several quintals of rice that was being sold illegally at Udupi. The rice was part of the ration under the Anna Bhagya scheme
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm