ಬ್ರೇಕಿಂಗ್ ನ್ಯೂಸ್
02-11-20 10:02 pm Udupi Reporter ಕರಾವಳಿ
ಉಡುಪಿ, ನ. 2: ಶಿರಿಯಾರ ಗ್ರಾಪಂ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿನ ರೈಸ್ಮಿಲ್ ಒಂದಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಅನ್ನಭಾಗ್ಯ ಯೋಜನೆಯ 600ಕ್ಕೂ ಅಧಿಕ ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದೆ.
ಜಿಲ್ಲೆಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡುತ್ತಿರುವ ಕುರಿತು ಮಾಹಿತಿ ಸಂಗ್ರಹಿಸಿದ್ದ ಅಧಿಕಾರಿಗಳು, ದಾಳಿ ನಡೆಸಿದ್ದಾರೆ. ಈ ಅಕ್ಕಿಯನ್ನು ಮನೆ ಮನೆಗಳಿಂದ ಸಂಗ್ರಹಿಸಿ ತಂದು ಇಲ್ಲಿ ದಾಸ್ತಾನು ಇರಿಸಲಾಗಿತ್ತು. ಈ ಅಕ್ಕಿಯನ್ನು ಲಾರಿಗಳಿಗೆ ಲೋಡ್ ಮಾಡಿ ಹಾವೇರಿ ಸೇರಿದಂತೆ ಹೊರಜಿಲ್ಲೆಗಳಿಗೆ ಸಾಗಾಟ ಮಾಡಲು ಯತ್ನ ನಡೆದಿತ್ತು. ದಾಳಿ ವೇಳೆ ಮಿಲ್ ಮಾಲಕ ಪರಾರಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.


ವಶಪಡಿಸಿಕೊಂಡಿರುವ ಅಕ್ಕಿಯ ಒಟ್ಟು ಮೌಲ್ಯ 16.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಅಕ್ಕಿ ತುಂಬಲು ಬಂದಿದ್ದ ಮೂವರು ಲಾರಿ ಚಾಲಕರು ಮತ್ತು ಕ್ಲೀನರ್ ಸೇರಿದಂತೆ, 6 ಲಾರಿಗಳು, ಎರಡು 407 ಟೆಂಪೋ, ಒಂದು ಟಾಟಾ ಹಾಗೂ ಮಾರುತಿ ಇಕೋ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಉಡುಪಿ ಆಹಾರ ಇಲಾಖೆಯ ಉಪನಿರ್ದೇಶಕ ಗಜೇಂದ್ರ ವಿ., ಉಡುಪಿ ಆಹಾರ ನಿರೀಕ್ಷಕಿ ಪಾರ್ವತಿ, ಕುಂದಾಪುರ ನಿರೀಕ್ಷಕ ಸುರೇಶ್, ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಮೊದಲಾದವರು ಹಾಜರಿದ್ದರು.
ಬಡವರ ಅಕ್ಕಿ ಉಳ್ಳವರ ಪಾಲು !
ಜಿಲ್ಲೆಯಲ್ಲಿ ಪಡಿತರವನ್ನು ಅಕ್ರಮವಾಗಿ ದಾಸ್ತಾನು, ಮಾರಾಟ ಮಾಡುವ ಜಾಲ ಸಕ್ರಿಯವಾಗಿದ್ದು, ಕಳೆದ ತಿಂಗಳು ಕುಂದಾಪುರ ತಾಲೂಕಿನಲ್ಲಿ ಈ ಜಾಲವನ್ನು ಪತ್ತೆ ಮಾಡಲಾಗಿತ್ತು. ಈಗ ಅಕ್ಕಿಯನ್ನು ಮಾರಾಟ ಮಾಡುವ ಜಾಲ ಪತ್ತೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಪಡಿತರ ಅಕ್ಕಿಯ ಅಕ್ರಮ ದಾಸ್ತಾನು, ಸಾಗಾಟ ಕುರಿತು ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ತಿಳಿಸಬೇಕು. ಆಗ ಮಾತ್ರ ಇಂತಹ ಜಾಲದ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.
Officials on Monday November 2 seized several quintals of rice that was being sold illegally at Udupi. The rice was part of the ration under the Anna Bhagya scheme
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am