ಬ್ರೇಕಿಂಗ್ ನ್ಯೂಸ್
03-07-23 10:31 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ನೂರಾರು ಬೀದಿ ನಾಯಿಗಳಿಗೆ ಊಟ ಹಾಕುವ ಮಂಗಳೂರಿನ ಶ್ವಾನ ಪ್ರೇಮಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆಯ ನಿವಾಸಿ ಮಹಿಳೆಯೊಬ್ಬರು ಹಲ್ಲೆ ಮಾಡಿದ್ದಾರೆ.
ಮಂಜುಳಾ ಶೆಟ್ಟಿ ಎಂಬ ಮಹಿಳೆ ರಜನಿ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆಂದು ದೂರಲಾಗಿದೆ. ಹಲ್ಲೆಗೀಡಾದ ರಜನಿ ವೆನ್ಲಾಕ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಅಲ್ಲದೆ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ. ರಜನಿ ಅವರು ತನ್ನ ಬಾಡಿಗೆ ಮನೆಯಲ್ಲಿದ್ದುಕೊಂಡೇ ದಿನವೂ ನೂರಾರು ಬೀದಿ ನಾಯಿಗಳಿಗೆ ಅನ್ನ ಬೇಯಿಸಿ ಹಾಕುತ್ತ ಬಂದಿದ್ದಾರೆ.


ಬೀದಿ ನಾಯಿಗಳು ಮನೆಯ ಸುತ್ತ ಸೇರುತ್ತಿದ್ದ ವಿಚಾರದಲ್ಲಿ ರಜನಿ ಮತ್ತು ಮಂಜುಳಾ ನಡುವೆ ಜಗಳ ಆಗುತ್ತಿತ್ತು. ಇಂದು ಬೆಳಗ್ಗೆ ಮಾತಿಗೆ ಮಾತು ಬೆಳೆದು ಜಗಳ ಆಗಿದೆ ಎನ್ನಲಾಗುತ್ತಿದೆ. ರಜನಿ ಶೆಟ್ಟಿಯವರ ಕೈಗೆ ಗಾಯವಾಗಿದೆ. ಎರಡು ವರ್ಷಗಳಿಂದ ನನ್ನ ಜೊತೆ ಜಗಳ ಮಾಡುತ್ತಿದ್ದಾಳೆ. ನೀರಿನ ಬಳಕೆ ವಿಚಾರದಲ್ಲೂ ಬೈಯುತ್ತಿದ್ದಳು. ಪ್ರತಿ ಬಾರಿ ಎಲ್ಲ ನಾಯಿಗಳಿಗೆ ಮತ್ತು ತನಗೆ ವಿಷ ಹಾಕಿ ಕೊಂದು ಹಾಕುವುದಾಗಿ ಬೆದರಿಸುತ್ತಿದ್ದಳು. ಇವತ್ತು ನನ್ನ ಮೇಲೆ ಕಲ್ಲು ತೂರಿದ್ದಾಳೆ. ನಾನು ನಾಯಿಗಳನ್ನು ಪೋಷಣೆ ಮಾಡುವುದನ್ನು ಬಿಡಬೇಕು ಮತ್ತು ಆ ಸ್ಥಳದಿಂದ ಎದ್ದು ಹೋಗಬೇಕು ಎಂಬುದು ಆಕೆಯ ಬಯಕೆ. ನಾನು 22 ವರ್ಷಗಳಿಂದ ನಾಯಿಗಳ ಜೊತೆಗಿದ್ದು ನನಗೆ ಯಾವುದೇ ಆರೋಗ್ಯ ತೊಂದರೆ ಆಗಿಲ್ಲ ಎಂದು ರಜನಿ ಶೆಟ್ಟಿ ತಿಳಿಸಿದ್ದಾರೆ.
ಹಲ್ಲೆ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ರಜನಿ ತನ್ನ ಮನೆಯಲ್ಲಿ ತೊಂದರೆಗೊಳಗಾದ ಬೀದಿ ನಾಯಿಗಳು, ಬೆಕ್ಕು, ಪಕ್ಷಿಗಳನ್ನು ಆರೈಕೆ ಮಾಡಿ ಸಾಕುತ್ತಿದ್ದಾರೆ.
Mangalore stray animal caretaker Rajani Shetty assaulted by neighbour over looking after dogs.Rajani was hit with a stone by her neighbour Manjula Shetty injuring her in the process. Rajani will file a complaint against Manjula
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm