ಬ್ರೇಕಿಂಗ್ ನ್ಯೂಸ್
05-07-23 11:17 am Mangalore Correspondent ಕರಾವಳಿ
ಉಳ್ಳಾಲ, ಜು.5: ಬಿರುಗಾಳಿಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಟ್ರಿಪ್ ಆಗಿ ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಬಂದ ಮೆಸ್ಕಾಂ ಪವರ್ ಮೆನ್ ನೆರೆ ನೀರಲ್ಲಿ ಮುಳುಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿದ ವೀಡಿಯೋ ವೈರಲ್ ಆಗಿದೆ.
ನಿನ್ನೆ ದೇರಳಕಟ್ಟೆಯ ಬೇರಿಕೆ ಎಂಬಲ್ಲಿ ಬಿರುಗಾಳಿ, ಮಳೆಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಸ್ಥಳೀಯ 40 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಬಗ್ಗೆ ಸ್ಥಳೀಯರು ಮೆಸ್ಕಾಂಗೆ ದೂರು ನೀಡಿದ್ದರು. ಸ್ಥಳಕ್ಕೆ ಮೆಸ್ಕಾಂ ಪವರ್ ಮೆನ್ ವಸಂತ್ ಎಂಬವರು ಭೇಟಿ ನೀಡಿದ್ದಾರೆ. ಆದರೆ ಟ್ರಿಪ್ ಆಗಿದ್ದ ವಿದ್ಯುತ್ ಕಂಬವು ನೆರೆ ನೀರಿಂದ ಸಂಪೂರ್ಣ ಜಲಾವೃತಗೊಂಡಿತ್ತು. ನೆರೆ ನೀರನ್ನ ಲೆಕ್ಕಿಸದ ವಸಂತ್ ಅವರು ಸ್ಥಳೀಯರೋರ್ವರ ಮಾರ್ಗದರ್ಶನದಿಂದ ನೀರಲ್ಲಿ ಮುಳುಗಿ ಒದ್ದೆಯಾಗಿಯೇ ಸಾಗಿ ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿ ಸ್ಥಳೀಯರ ಪ್ರಶಂಸೆಗೆ ಪಾತ್ರರಾಗಿದ್ದಾರೆ.


ವಿದ್ಯುತ್ ಸರಬರಾಜಲ್ಲಿ ಸ್ವಲ್ಪ ವ್ಯತ್ಯಯವಾದರೂ ಮೆಸ್ಕಾಂ ಸಿಬ್ಬಂದಿಗಳಿಗೆ ಹಿಡಿ ಶಾಪ ಹಾಕುವವರೇ ಹೆಚ್ಚು. ಆದರೆ ಬಿರು ಗಾಳಿ, ಮಳೆ, ಉರಿ ಬಿಸಿಲನ್ನೂ ಲೆಕ್ಕಿಸದೆ ತುರ್ತು ಕಾರ್ಯಾಚರಣೆ ಮಾಡಿ ಜನರಿಗೆ ವಿದ್ಯುತ್ ಸಂಪರ್ಕ ಒದಗಿಸುವ ಇಂತಹ ಪವರ್ ಮೆನ್ ಗಳನ್ನು ಮೆಚ್ಚಲೇ ಬೇಕು.
MESCOM line man gets into flooded water to fix power issue, pics goes viral at Derlakatte in Mangalore
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am