ಬ್ರೇಕಿಂಗ್ ನ್ಯೂಸ್
05-07-23 03:14 pm Mangalore Correspondent ಕರಾವಳಿ
ಉಳ್ಳಾಲ, ಜು.5: ಭಾರೀ ಮಳೆಗೆ ಸೋಮೇಶ್ವರದ ರೈಲ್ವೇ ನಿಲ್ದಾಣದ ಬಳಿ ವಾಸವಿದ್ದ ಬಡ ವಿಧವೆಯರಿಬ್ಬರ ಮನೆ ಕುಸಿದು ಬಿದ್ದಿದೆ. ಅಪಾಯದಲ್ಲಿದ್ದ ಮನೆಯ ದುರಸ್ತಿಗಾಗಿ ಕುಟಂಬವನ್ನ ಮೊದಲೇ ಸ್ಥಳಾಂತರಿಸಿದ್ದರಿಂದ ಪ್ರಾಣಾಪಾಯ ತಪ್ಪಿದೆ.
ಸೋಮೇಶ್ವರದ ಉಳ್ಳಾಲ ರೈಲ್ವೇ ನಿಲ್ದಾಣದ ಹಿಂಬದಿಯ ವಿಧವೆ ಶೋಭಾ ಅವರ ಮನೆ ನಿನ್ನೆ ರಾತ್ರಿ ಸುರಿದ ಗಾಳಿ, ಮಳೆಗೆ ಉರುಳಿ ಬಿದ್ದಿದೆ. ಶೋಭಾ ಅವರ ಪತಿ ಕೆಲವು ವರ್ಷಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಆಬಳಿಕ ಶೋಭಾ ಅವರು ತನ್ನ ಸಹೋದರ ವಸಂತ್ ಮತ್ತು ಆತನ ಪತ್ನಿ ಹೇಮಾ ಜೊತೆ ವಾಸವಿದ್ದರು. ವರ್ಷದ ಹಿಂದೆ ಮನೆಗೆ ಆಧಾರ ಸ್ತಂಭವಾಗಿದ್ದ ಶೋಭಾರ ತಮ್ಮ ವಸಂತ್ ಅವರೂ ನೀರಿಗೆ ಬಿದ್ದು ಆಕಸ್ಮಿಕವಾಗಿ ಮೃತಪಟ್ಟಿದ್ದರು.
ಶೋಭಾ ಅವರು ತನ್ನ ತಮ್ಮನ ಪತ್ನಿ ಹೇಮಾ ಮತ್ತು ಆಕೆಯ ಏಕೈಕ ಗಂಡು ಮಗು ಜೊತೆ ಹರಕಲು, ಮುರುಕಲು ಮನೆಯಲ್ಲಿ ವಾಸವಿದ್ದರು. ಈ ಬಡ ಕುಟುಂಬದ ಬಗ್ಗೆ ಮರುಕಪಟ್ಟ ಸ್ಥಳೀಯ ರಕ್ತೇಶ್ವರಿ ಬಳಗದವರು ಮನೆಯ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುವ ಸಲುವಾಗಿ ಕುಟುಂಬವನ್ನ ಹತ್ತಿರದ ಮನೆಯೊಂದಕ್ಕೆ ಸ್ಥಳಾಂತರಿಸಿದ್ದರು. ಘಟನೆ ನಡೆದ ಸಂದರ್ಭ ಕುಟುಂಬ ಸದಸ್ಯರು ಮನೆಯಲ್ಲಿರದ ಕಾರಣ ಪ್ರಾಣ ಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಸೋಮೇಶ್ವರ ಪುರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಡ ವಿಧವೆಯರ ಕುಟುಂಬಕ್ಕೆ ಸುಸಜ್ಜಿತ ಮನೆ ನಿರ್ಮಿಸಲು ರಕ್ತೇಶ್ವರಿ ಬಳಗದ ಸದಸ್ಯರು ಮುಂದಾಗಿದ್ದು ಕುಟುಂಬಕ್ಕೆ ಸರಕಾರ ಮತ್ತು ದಾನಿಗಳ ಸಹಕಾರ ಯಾಚಿಸಿದ್ದಾರೆ.
Heavy Rains in Mangalore, House of Widow collapsed due to heavys winds at Someshwar in Ullal. Schools and colleges have been delcared holiday due to heavy rains in Mangalore.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm