ಬ್ರೇಕಿಂಗ್ ನ್ಯೂಸ್
05-07-23 06:03 pm Udupi Correspondent ಕರಾವಳಿ
ಉಡುಪಿ, ಜು 05: ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಮೂರನೇ ಸಾವು ಸಂಭವಿಸಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ.
ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ನಡೆದಿದೆ. ಶೇಷಾದ್ರಿ ಐತಾಳ್ ( 75) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಮಲಶಿಲೆ ಸಮೀಪದ ತಪ್ಪಲು ನಿವಾಸಿ ಶೇಷಾದ್ರಿ ಐತಾಳ್ ಅವರು ಎಂದಿನಂತೆ ಇಂದು ಪ್ರಸಿದ್ಧ ದೇವಾಲಯ ಕಮಲಶಿಲೆಗ ಪೂಜೆ ಮಾಡಲು ಆಗಮಿಸುತ್ತಿದ್ದರು.
ಕಳೆದ ಎರಡು ದಿನಗಳಿಂದ ಸುರಿದ ನಿರಂತರ ಭಾರೀ ಮಳೆಗೆ ಕಮಲಶಿಲೆ ದೇವಳದ ಪಕ್ಕದಲ್ಲಿ ಹರಿಯುವ ಕುಬ್ಜಾ ನದಿ ಉಕ್ಕಿ ಹರಿಯುತ್ತಿದ್ದು, ಅರ್ಚಕರು ಆಯಾ ತಪ್ಪಿ ನದಿಗೆ ಬಿದ್ದು ನೀರು ಪಾಲಾಗಿದ್ದಾರೆ. ನದಿಗೆ ಬಿದ್ದ ಜಾಗದಿಂದ ಸುಮಾರು ನೂರು ಮೀಟರ್ ದೂರಲ್ಲಿ ಶೇಷಾದ್ರಿ ಐತಾಳ್ ಅವರ ಮೃತದೇಹ ಪತ್ತೆಯಾಗಿದ್ದು, ಮುಳುಗು ತಜ್ಞ ಮಂಜುನಾಥ್ ನಾಯಕ್ ತಂಡ ಮೃತದೇಹ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kamalashile temple priest drowned in river after accidentally fall from two wheeler due to heavy rains in Udupi.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm