ಬ್ರೇಕಿಂಗ್ ನ್ಯೂಸ್
05-07-23 10:01 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜೂನ್ ತಿಂಗಳ ಅಂತ್ಯಕ್ಕೆ ಆರಂಭಗೊಂಡ ಮುಂಗಾರು ಕಡೆಗೂ ತೀವ್ರತೆ ಪಡೆದಿದೆ. ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರಿನ ಅಬ್ಬರ ಹಳೆಕಾಲದ ರೀತಿಯಲ್ಲೇ ಮರುಕಳಿಸಿದೆ. ಇಡೀ ದಿನವೂ ಎಡೆಬಿಡದೆ ಮಳೆ ಸುರಿಯುವುದು, ನಡು ನಡುವೆ ಬಿರುಸು ಪಡೆಯುವುದು ಮಳೆಗಾಲದ ಉಚ್ಛ್ರಾಯ ಸ್ಥಿತಿ. ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ನೋಡಿದರೆ, ಅದೇ ರೀತಿಯ ಅನುಭವ ಆಗುತ್ತದೆ.
ಹವಾಮಾನ ಇಲಾಖೆಯ ಪ್ರಕಾರ, ಜುಲೈ 4 ಮತ್ತು 5ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಅಂದರೆ, 24 ಗಂಟೆಯಲ್ಲಿ 20 ಸೆಂಟಿ ಮೀಟರಿಗಿಂತ(200 ಮಿಮೀ) ಹೆಚ್ಚು ಮಳೆಯಾಗುತ್ತದೆ ಅನ್ನುವ ಅಂದಾಜು ಹೇಳಲಾಗಿತ್ತು. ಬಹುತೇಕ ಅದೇ ಪ್ರಮಾಣದಲ್ಲಿ ಮಳೆಯಾಗಿದ್ದು, ಜುಲೈ 5ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 101.3 ಮಿಮೀ ಅಂದರೆ, ಹತ್ತು ಸೆಂಟಿ ಮೀಟರ್ ಗಿಂತ ಹೆಚ್ಚು ಮಳೆಯಾಗಿದೆ. ಮೂಡುಬಿದ್ರೆಯಲ್ಲಿ 143 ಮಿಮೀ(14 ಸೆಮೀ) ಅತಿ ಹೆಚ್ಚು ಮಳೆಯಾಗಿದ್ದರೆ, ಆನಂತರ ಬೆಳ್ತಂಗಡಿಯಲ್ಲಿ 114 ಮಿಮೀ, ಬಂಟ್ವಾಳದಲ್ಲಿ 123 ಮಿಮೀ, ಮಂಗಳೂರಿನಲ್ಲಿ 97, ಪುತ್ತೂರಿನಲ್ಲಿ 90, ಸುಳ್ಯದಲ್ಲಿ 70, ಕಡಬದಲ್ಲಿ 77 ಮಿಮೀ ಮಳೆಯಾಗಿದೆ. ವಾಡಿಕೆಯ ಪ್ರಕಾರ, ಈ ಸಮಯದಲ್ಲಿ 38 ಮಿಮೀ ಮಳೆಯಾಗಬೇಕಿದ್ದರೆ, ಇದೀಗ 101 ಮಿಮೀ ಮಳೆ ದಾಖಲಾಗಿದೆ.


ಜುಲೈ 6 ಮತ್ತು 7ರಂದು ಆರೆಂಜ್ ಅಲರ್ಟ್ ನೀಡಲಾಗಿದ್ದು, ಇದರ ಪ್ರಕಾರ, 115 ಮಿಮೀಗಿಂತ 200 ಮಿಮೀ ಮಳೆಯಾಗಬಹುದು ಎಂಬ ಲೆಕ್ಕಾಚಾರ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಆದರೆ ಎರಡು ದಿನಗಳಿಂದ ಧಾರಾಕಾರ ಮಳೆಯಾದರೂ, ನದಿಗಳಲ್ಲಿ ನೀರಿನ ಹರಿವು ದೊಡ್ಡ ಮಟ್ಟಿನಲ್ಲಿ ಹೆಚ್ಚಿಗೆಯಾಗಿಲ್ಲ. ಜೂನ್ ತಿಂಗಳಲ್ಲಿ ವಾಡಿಕೆಯ ಮಳೆಯೂ ಬಾರದೇ ಇರುವುದರಿಂದ ಜೂನ್ ಕೊನೆಯ ವರೆಗೂ ಹೆಚ್ಚಿನ ಕಡೆಗಳಲ್ಲಿ ನದಿಗಳಲ್ಲಿ ಹರಿವು ಆರಂಭ ಆಗಿರಲಿಲ್ಲ.

ಮೊನ್ನೆ ಜುಲೈ ಬಳಿಕ ಮಳೆ ತೀವ್ರತೆ ಪಡೆದಿದ್ದು ಈಗಷ್ಟೇ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಹೀಗಾಗಿ ಎರಡು ದಿನಗಳಲ್ಲಿ ಎಡೆಬಿಡದೆ ಮಳೆ ಬಂದರೂ, ಬಂಟ್ವಾಳದಲ್ಲಿ ನೆರೆ ಆವರಿಸುವ ಸ್ಥಿತಿ ಬಂದಿಲ್ಲ. ತುಂಬೆಯ ಅಣೆಕಟ್ಟಿನಲ್ಲಿ ಇನ್ನೂ ನೀರು ತುಂಬಿಲ್ಲ. ಅಣೆಕಟ್ಟಿನ ಒಟ್ಟು 30 ಗೇಟ್ ಗಳಲ್ಲಿ 15 ಗೇಟನ್ನಷ್ಟೇ ಓಪನ್ ಮಾಡಲಾಗಿದೆ. ಇದಲ್ಲದೆ, ನೇತ್ರಾವತಿ ತುಂಬಿ ಹರಿಯುವ ಮಟ್ಟ 9 ಮೀಟರ್ ಆಗಿದ್ದರೆ, ಈಗ 3.6 ಮೀಟರ್ ಎತ್ತರದಲ್ಲಷ್ಟೇ ನೀರು ಹರಿಯುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
Hevay rain in Mangalore and moodbidri, yet dams not filled with enough water.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm