ಬ್ರೇಕಿಂಗ್ ನ್ಯೂಸ್
05-07-23 10:01 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜೂನ್ ತಿಂಗಳ ಅಂತ್ಯಕ್ಕೆ ಆರಂಭಗೊಂಡ ಮುಂಗಾರು ಕಡೆಗೂ ತೀವ್ರತೆ ಪಡೆದಿದೆ. ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರಿನ ಅಬ್ಬರ ಹಳೆಕಾಲದ ರೀತಿಯಲ್ಲೇ ಮರುಕಳಿಸಿದೆ. ಇಡೀ ದಿನವೂ ಎಡೆಬಿಡದೆ ಮಳೆ ಸುರಿಯುವುದು, ನಡು ನಡುವೆ ಬಿರುಸು ಪಡೆಯುವುದು ಮಳೆಗಾಲದ ಉಚ್ಛ್ರಾಯ ಸ್ಥಿತಿ. ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ನೋಡಿದರೆ, ಅದೇ ರೀತಿಯ ಅನುಭವ ಆಗುತ್ತದೆ.
ಹವಾಮಾನ ಇಲಾಖೆಯ ಪ್ರಕಾರ, ಜುಲೈ 4 ಮತ್ತು 5ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಅಂದರೆ, 24 ಗಂಟೆಯಲ್ಲಿ 20 ಸೆಂಟಿ ಮೀಟರಿಗಿಂತ(200 ಮಿಮೀ) ಹೆಚ್ಚು ಮಳೆಯಾಗುತ್ತದೆ ಅನ್ನುವ ಅಂದಾಜು ಹೇಳಲಾಗಿತ್ತು. ಬಹುತೇಕ ಅದೇ ಪ್ರಮಾಣದಲ್ಲಿ ಮಳೆಯಾಗಿದ್ದು, ಜುಲೈ 5ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 101.3 ಮಿಮೀ ಅಂದರೆ, ಹತ್ತು ಸೆಂಟಿ ಮೀಟರ್ ಗಿಂತ ಹೆಚ್ಚು ಮಳೆಯಾಗಿದೆ. ಮೂಡುಬಿದ್ರೆಯಲ್ಲಿ 143 ಮಿಮೀ(14 ಸೆಮೀ) ಅತಿ ಹೆಚ್ಚು ಮಳೆಯಾಗಿದ್ದರೆ, ಆನಂತರ ಬೆಳ್ತಂಗಡಿಯಲ್ಲಿ 114 ಮಿಮೀ, ಬಂಟ್ವಾಳದಲ್ಲಿ 123 ಮಿಮೀ, ಮಂಗಳೂರಿನಲ್ಲಿ 97, ಪುತ್ತೂರಿನಲ್ಲಿ 90, ಸುಳ್ಯದಲ್ಲಿ 70, ಕಡಬದಲ್ಲಿ 77 ಮಿಮೀ ಮಳೆಯಾಗಿದೆ. ವಾಡಿಕೆಯ ಪ್ರಕಾರ, ಈ ಸಮಯದಲ್ಲಿ 38 ಮಿಮೀ ಮಳೆಯಾಗಬೇಕಿದ್ದರೆ, ಇದೀಗ 101 ಮಿಮೀ ಮಳೆ ದಾಖಲಾಗಿದೆ.


ಜುಲೈ 6 ಮತ್ತು 7ರಂದು ಆರೆಂಜ್ ಅಲರ್ಟ್ ನೀಡಲಾಗಿದ್ದು, ಇದರ ಪ್ರಕಾರ, 115 ಮಿಮೀಗಿಂತ 200 ಮಿಮೀ ಮಳೆಯಾಗಬಹುದು ಎಂಬ ಲೆಕ್ಕಾಚಾರ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಆದರೆ ಎರಡು ದಿನಗಳಿಂದ ಧಾರಾಕಾರ ಮಳೆಯಾದರೂ, ನದಿಗಳಲ್ಲಿ ನೀರಿನ ಹರಿವು ದೊಡ್ಡ ಮಟ್ಟಿನಲ್ಲಿ ಹೆಚ್ಚಿಗೆಯಾಗಿಲ್ಲ. ಜೂನ್ ತಿಂಗಳಲ್ಲಿ ವಾಡಿಕೆಯ ಮಳೆಯೂ ಬಾರದೇ ಇರುವುದರಿಂದ ಜೂನ್ ಕೊನೆಯ ವರೆಗೂ ಹೆಚ್ಚಿನ ಕಡೆಗಳಲ್ಲಿ ನದಿಗಳಲ್ಲಿ ಹರಿವು ಆರಂಭ ಆಗಿರಲಿಲ್ಲ.

ಮೊನ್ನೆ ಜುಲೈ ಬಳಿಕ ಮಳೆ ತೀವ್ರತೆ ಪಡೆದಿದ್ದು ಈಗಷ್ಟೇ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಹೀಗಾಗಿ ಎರಡು ದಿನಗಳಲ್ಲಿ ಎಡೆಬಿಡದೆ ಮಳೆ ಬಂದರೂ, ಬಂಟ್ವಾಳದಲ್ಲಿ ನೆರೆ ಆವರಿಸುವ ಸ್ಥಿತಿ ಬಂದಿಲ್ಲ. ತುಂಬೆಯ ಅಣೆಕಟ್ಟಿನಲ್ಲಿ ಇನ್ನೂ ನೀರು ತುಂಬಿಲ್ಲ. ಅಣೆಕಟ್ಟಿನ ಒಟ್ಟು 30 ಗೇಟ್ ಗಳಲ್ಲಿ 15 ಗೇಟನ್ನಷ್ಟೇ ಓಪನ್ ಮಾಡಲಾಗಿದೆ. ಇದಲ್ಲದೆ, ನೇತ್ರಾವತಿ ತುಂಬಿ ಹರಿಯುವ ಮಟ್ಟ 9 ಮೀಟರ್ ಆಗಿದ್ದರೆ, ಈಗ 3.6 ಮೀಟರ್ ಎತ್ತರದಲ್ಲಷ್ಟೇ ನೀರು ಹರಿಯುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
Hevay rain in Mangalore and moodbidri, yet dams not filled with enough water.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm