ಬ್ರೇಕಿಂಗ್ ನ್ಯೂಸ್
05-07-23 10:01 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜೂನ್ ತಿಂಗಳ ಅಂತ್ಯಕ್ಕೆ ಆರಂಭಗೊಂಡ ಮುಂಗಾರು ಕಡೆಗೂ ತೀವ್ರತೆ ಪಡೆದಿದೆ. ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರಿನ ಅಬ್ಬರ ಹಳೆಕಾಲದ ರೀತಿಯಲ್ಲೇ ಮರುಕಳಿಸಿದೆ. ಇಡೀ ದಿನವೂ ಎಡೆಬಿಡದೆ ಮಳೆ ಸುರಿಯುವುದು, ನಡು ನಡುವೆ ಬಿರುಸು ಪಡೆಯುವುದು ಮಳೆಗಾಲದ ಉಚ್ಛ್ರಾಯ ಸ್ಥಿತಿ. ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ನೋಡಿದರೆ, ಅದೇ ರೀತಿಯ ಅನುಭವ ಆಗುತ್ತದೆ.
ಹವಾಮಾನ ಇಲಾಖೆಯ ಪ್ರಕಾರ, ಜುಲೈ 4 ಮತ್ತು 5ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಅಂದರೆ, 24 ಗಂಟೆಯಲ್ಲಿ 20 ಸೆಂಟಿ ಮೀಟರಿಗಿಂತ(200 ಮಿಮೀ) ಹೆಚ್ಚು ಮಳೆಯಾಗುತ್ತದೆ ಅನ್ನುವ ಅಂದಾಜು ಹೇಳಲಾಗಿತ್ತು. ಬಹುತೇಕ ಅದೇ ಪ್ರಮಾಣದಲ್ಲಿ ಮಳೆಯಾಗಿದ್ದು, ಜುಲೈ 5ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 101.3 ಮಿಮೀ ಅಂದರೆ, ಹತ್ತು ಸೆಂಟಿ ಮೀಟರ್ ಗಿಂತ ಹೆಚ್ಚು ಮಳೆಯಾಗಿದೆ. ಮೂಡುಬಿದ್ರೆಯಲ್ಲಿ 143 ಮಿಮೀ(14 ಸೆಮೀ) ಅತಿ ಹೆಚ್ಚು ಮಳೆಯಾಗಿದ್ದರೆ, ಆನಂತರ ಬೆಳ್ತಂಗಡಿಯಲ್ಲಿ 114 ಮಿಮೀ, ಬಂಟ್ವಾಳದಲ್ಲಿ 123 ಮಿಮೀ, ಮಂಗಳೂರಿನಲ್ಲಿ 97, ಪುತ್ತೂರಿನಲ್ಲಿ 90, ಸುಳ್ಯದಲ್ಲಿ 70, ಕಡಬದಲ್ಲಿ 77 ಮಿಮೀ ಮಳೆಯಾಗಿದೆ. ವಾಡಿಕೆಯ ಪ್ರಕಾರ, ಈ ಸಮಯದಲ್ಲಿ 38 ಮಿಮೀ ಮಳೆಯಾಗಬೇಕಿದ್ದರೆ, ಇದೀಗ 101 ಮಿಮೀ ಮಳೆ ದಾಖಲಾಗಿದೆ.
ಜುಲೈ 6 ಮತ್ತು 7ರಂದು ಆರೆಂಜ್ ಅಲರ್ಟ್ ನೀಡಲಾಗಿದ್ದು, ಇದರ ಪ್ರಕಾರ, 115 ಮಿಮೀಗಿಂತ 200 ಮಿಮೀ ಮಳೆಯಾಗಬಹುದು ಎಂಬ ಲೆಕ್ಕಾಚಾರ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಆದರೆ ಎರಡು ದಿನಗಳಿಂದ ಧಾರಾಕಾರ ಮಳೆಯಾದರೂ, ನದಿಗಳಲ್ಲಿ ನೀರಿನ ಹರಿವು ದೊಡ್ಡ ಮಟ್ಟಿನಲ್ಲಿ ಹೆಚ್ಚಿಗೆಯಾಗಿಲ್ಲ. ಜೂನ್ ತಿಂಗಳಲ್ಲಿ ವಾಡಿಕೆಯ ಮಳೆಯೂ ಬಾರದೇ ಇರುವುದರಿಂದ ಜೂನ್ ಕೊನೆಯ ವರೆಗೂ ಹೆಚ್ಚಿನ ಕಡೆಗಳಲ್ಲಿ ನದಿಗಳಲ್ಲಿ ಹರಿವು ಆರಂಭ ಆಗಿರಲಿಲ್ಲ.
ಮೊನ್ನೆ ಜುಲೈ ಬಳಿಕ ಮಳೆ ತೀವ್ರತೆ ಪಡೆದಿದ್ದು ಈಗಷ್ಟೇ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಹೀಗಾಗಿ ಎರಡು ದಿನಗಳಲ್ಲಿ ಎಡೆಬಿಡದೆ ಮಳೆ ಬಂದರೂ, ಬಂಟ್ವಾಳದಲ್ಲಿ ನೆರೆ ಆವರಿಸುವ ಸ್ಥಿತಿ ಬಂದಿಲ್ಲ. ತುಂಬೆಯ ಅಣೆಕಟ್ಟಿನಲ್ಲಿ ಇನ್ನೂ ನೀರು ತುಂಬಿಲ್ಲ. ಅಣೆಕಟ್ಟಿನ ಒಟ್ಟು 30 ಗೇಟ್ ಗಳಲ್ಲಿ 15 ಗೇಟನ್ನಷ್ಟೇ ಓಪನ್ ಮಾಡಲಾಗಿದೆ. ಇದಲ್ಲದೆ, ನೇತ್ರಾವತಿ ತುಂಬಿ ಹರಿಯುವ ಮಟ್ಟ 9 ಮೀಟರ್ ಆಗಿದ್ದರೆ, ಈಗ 3.6 ಮೀಟರ್ ಎತ್ತರದಲ್ಲಷ್ಟೇ ನೀರು ಹರಿಯುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
Hevay rain in Mangalore and moodbidri, yet dams not filled with enough water.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm