ಬ್ರೇಕಿಂಗ್ ನ್ಯೂಸ್
05-07-23 10:47 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿ, ಮೀನುಗಾರಿಕೆ, ನದಿ, ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಿದ್ದರೂ, ಹರೇಕಳದ ಮೀನುಗಾರನೊಬ್ಬ ದುಸ್ಸಾಹಸ ಮಾಡಿದ್ದು ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ.
ಬುಧವಾರ ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಉಳ್ಳಾಲದ ಹರೇಕಳದ ಮೀನುಗಾರನೊಬ್ಬ ದೋಣಿಯಲ್ಲಿ ಮೀನು ಹಿಡಿಯಲು ಹೋಗಿದ್ದ. ಮಧ್ಯಾಹ್ನ ವೇಳೆಗೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ದೋಣಿ ನೀರಿನಲ್ಲಿ ಮಗುಚಿ ಬಿದ್ದಿದೆ. ಹರೇಕಳ- ಅಡ್ಯಾರ್ ನಡುವೆ ಕಟ್ಟಿರುವ ಹೊಸ ಸೇತುವೆಯ ಬಳಿಯಲ್ಲೇ ಘಟನೆ ನಡೆದಿದ್ದು, ಮೀನುಗಾರ ದುಸ್ಸಾಹಸ ಮೆರೆದಿದ್ದನ್ನು ಸ್ಥಳೀಯರು ನೋಡಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಯುವಕರು ಮೀನುಗಾರನಿಗೆ ಹಗ್ಗ ಇಳಿಸಿ, ರಕ್ಷಿಸುವ ಯತ್ನ ಮಾಡಿದ್ದಾರೆ. ದೋಣಿಯನ್ನು ಬಿಟ್ಟು ಮೀನುಗಾರ ಸೇತುವೆಯ ಮೂಲಕ ಮೇಲಕ್ಕೇರಿದ್ದು, ಅಪಾಯದಿಂದ ಪಾರಾಗಿದ್ದಾನೆ. ತುಂಬೆಯ ಡ್ಯಾಮಿನಲ್ಲಿ ಗೇಟ್ ಓಪನ್ ಮಾಡಿದ್ದರಿಂದ ನದಿಯಲ್ಲಿ ಒಮ್ಮಿಂದೊಮ್ಮೆಗೆ ನೀರಿನ ಪ್ರಮಾಣ ಏರಿಕೆಯಾಗಿತ್ತು. ಅಡ್ಯಾರ್ ಭಾಗದಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರ ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ನೀರಿನಲ್ಲಿ ಸಿಲುಕಿದ್ದು ಅಪಾಯಕ್ಕೀಡಾಗಿದ್ದ. ಯುವಕನ ರಕ್ಷಣೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.
The boat of a youth who went fishing by boat despite warnings of Red Alert by the weather department capsized. He was rescued by the residents of Harekala. The incident happened below Harekala-Adyar bridge in the Netravati river on Wednesday July 5.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am