ಬ್ರೇಕಿಂಗ್ ನ್ಯೂಸ್
06-07-23 03:17 pm Mangalore Correspondent ಕರಾವಳಿ
ಉಳ್ಳಾಲ, ಜು.6: ದೇವಿ ಜಾತ್ರೆ ನಡೆಸುವ ನೆಪದಲ್ಲಿ ಅಪರಿಚಿತ ಯುವಕರ ತಂಡವೊಂದು ಕೇಸರಿ ಬಟ್ಟೆ ತೊಟ್ಟು ಮಂಗಳೂರಿನಲ್ಲಿ ರಾತ್ರಿ ವೇಳೆಯೂ ಭಿಕ್ಷಾಟನೆಯಲ್ಲಿ ತೊಡಗಿದ್ದು, ಅನುಮಾನಸ್ಪದ ಯುವಕನನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತೊಕ್ಕೊಟ್ಟು ಕಾಪಿಕಾಡಿನ ರಾಜ್ ಕೇಟರರ್ಸ್ ಕಚೇರಿಗೆ ನಿನ್ನೆ ರಾತ್ರಿ 8 ಗಂಟೆಗೆ ಖಾವಿ ತೊಟ್ಟಿದ್ದ ಯುವಕನೋರ್ವ ಪ್ರವೇಶಿಸಿ ನಮ್ಮೂರಿನ ದೇವಿ ಜಾತ್ರೆಗೆ ಚಂದಾ ನೀಡುವಂತೆ ಕೇಟರಿಂಗ್ ಮಾಲಕ ರಾಜೇಶ್ ಕಾಪಿಕಾಡು ಅವರಲ್ಲಿ ಕೇಳಿದ್ದಾನೆ. ರಾತ್ರಿ ವೇಳೆ ಬಂದಿದ್ದ ಖಾವಿಧಾರಿ ವ್ಯಕ್ತಿ ಸೊಂಟಕ್ಕೆ ಪ್ಲಾಸ್ಟಿಕ್ ಕೊಡದ ಹುಂಡಿ, ದೇವಿಯ ಫೋಟೊ ಅಳವಡಿಸಿದ್ದನ್ನ ಕಂಡು ಅನುಮಾನದಲ್ಲಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕಕ್ಕಾಬಿಕ್ಕಿಯಾದ ಯುವಕ ತನ್ನ ಹೆಸರು ಮುತ್ತಪ್ಪ, ಹೈದರಾಬಾದ್ ಮೂಲದವನೆಂದು ಹೇಳಿದ್ದ. ಅಲ್ಲದೆ, ಮೂವತ್ತು ಜನ ಮಂಗಳೂರು ನಗರದಲ್ಲಿ ಇದೇ ರೀತಿ ಕಲೆಕ್ಷನ್ ಮಾಡುತ್ತಿರುವುದಾಗಿ ಕನ್ನಡ ಭಾಷೆಯಲ್ಲಿ ಹೇಳಿದ್ದಾನೆ. ಯುವಕನ ಬಳಿ ಮೊಬೈಲ್ ಆಗಲಿ,ಯಾವುದೇ ಗುರುತಿನ ಚೀಟಿ ಇಲ್ಲದನ್ನ ಗಮನಿಸಿದ ರಾಜೇಶ್ ಅವರು ಸ್ಥಳಕ್ಕೆ ಉಳ್ಳಾಲ ಪೊಲೀಸರನ್ನ ಕರೆಸಿದ್ದಾರೆ.
ಹೊರ ಜಿಲ್ಲೆಯ ಖಾವಿಧಾರಿ ಯುವಕನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಯುವಕ ತಾನು ಜಮಖಂಡಿ ಜಿಲ್ಲೆಯವನೆಂದು ಧ್ವಂದ್ವ ಹೇಳಿಕೆ ನೀಡಿದ್ದಾನೆ. ಹೊರ ಜಿಲ್ಲೆಯ ನಿರುದ್ಯೋಗಿ ಯುವಕರು ಖಾವಿ ವೇಷ ತೊಟ್ಟು ರಾತ್ರಿ ವೇಳೆ ಚಂದಾ ಎತ್ತುವ ಸೋಗಲ್ಲಿ ದರೋಡೆ ಮಾಡಲು ಯೋಜನೆ ರೂಪಿಸಿದ್ದಾರೆಯೇ ಎಂಬ ಅನುಮಾನ ಸ್ಥಳೀಯರಲ್ಲಿ ಮೂಡಿದೆ. ಪೊಲೀಸರು ಸಮರ್ಪಕ ತನಿಖೆ ನಡೆಸಿದರೆ ಅಸಲಿಯತ್ತು ಬೆಳಕಿಗೆ ಬರಬಹುದು. ಇಂತಹ ಖಾವಿಧಾರಿಗಳು ಮನೆಗೆ ಬಂದಲ್ಲಿ ಸಾರ್ವಜನಿಕರು ಜಾಗರೂಕರಾಗಿರುವಂತೆ ಪೊಲೀಸರು ಮನವಿ ಮಾಡಿದ್ದಾರೆ.
Ullal police arrest youths dressed in kesari begging for money at night in suspicious way in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm