ಬ್ರೇಕಿಂಗ್ ನ್ಯೂಸ್
06-07-23 03:54 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಮತ್ತೆ ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 6 ಮತ್ತು 7ರಂದು ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬುಧವಾರ ವರದಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅರೆಂಜ್ ಅಲರ್ಟ್ ನೀಡಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಸೂಚನೆ ಇತ್ತು. ಗುರುವಾರ ಮಧ್ಯಾಹ್ನ ಬಂದ ಹವಾಮಾನ ವರದಿಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೂ ಕಟ್ಟೆಚ್ಚರ ಸೂಚನೆ ನೀಡಲಾಗಿದ್ದು ಭಾರೀ ಗಾಳಿ, ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ, ಜುಲೈಲ 10ರ ವರೆಗೂ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.





ಮೂಲ್ಕಿ ಭಾಗದಲ್ಲಿ ಉಕ್ಕಿದ ಶಾಂಭವಿ ನದಿ
ಸದ್ಯಕ್ಕೆ ಮಂಗಳೂರಿನಲ್ಲಿ ಗುರುವಾರ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಮಳೆಯ ತೀವ್ರತೆ ಕಡಿಮೆ ಇತ್ತು. ನಿನ್ನೆ ರಾತ್ರಿ ಭಾರೀ ಮಳೆಯಾಗಿದ್ದರಿಂದ ತಗ್ಗಿನ ಪ್ರದೇಶಗಳಲ್ಲಿ ನೆರೆ ನೀರು ನುಗ್ಗಿತ್ತು. ಮೂಡುಬಿದ್ರೆಯಲ್ಲಿ ಭಾರೀ ಮಳೆಯಾಗಿದ್ದರಿಂದ ಮೂಲ್ಕಿ ಭಾಗದಲ್ಲಿ ಹರಿಯುವ ಶಾಂಭವಿ ನದಿಯಲ್ಲಿ ನೆರೆ ಆವರಿಸಿದೆ. ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ನೀರು ನುಗ್ಗಿದ್ದರಿಂದ ಅಂಗಣದಲ್ಲಿ ಮೊಣ ಕಾಲು ಮುಳುಗುವಷ್ಟು ನೀರು ನಿಂತಿತ್ತು. ಇದಲ್ಲದೆ, ಮೂಲ್ಕಿ ಅತಿಕಾರಿಬೆಟ್ಟು ಗ್ರಾಮದ ಮಟ್ಟು ಎಂಬ ಪ್ರದೇಶದಲ್ಲಿ ನೀರು ಆವರಿಸಿದ್ದು, ಅಲ್ಲಿನ ಹತ್ತು ಮನೆಗಳ ನಿವಾಸಿಗಳಿಗೆ ದಿಗ್ಬಂಧನ ವಿಧಿಸಿದೆ. ನೀರು ಕಡಿಮೆಯಾಗದೇ ಇದ್ದರೆ ಅವರನ್ನು ಸ್ಥಳಾಂತರ ಮಾಡಬೇಕಾದೀತು ಎಂದು ಸ್ಥಳೀಯ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
Heavy rain in #Mangalore, water enters #Bappanadu Sri Durga Parameshwari Temple in #Mulki, #Redsalert declared again in #DakshinaKannada #BreakingNews pic.twitter.com/IQlja38HuZ
— Headline Karnataka (@hknewsonline) July 6, 2023
Heavy rain in Mangalore, water enters Bappanadu Sri Durga Parameshwari Temple in Mulki, Red alert declared again in Dakshina Kannada. Wednesday orange alert had been declared but now on Thursday due to continues rain Red alert has been declared.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm