ಬ್ರೇಕಿಂಗ್ ನ್ಯೂಸ್
06-07-23 04:53 pm Mangalore Correspondent ಕರಾವಳಿ
ಮಂಗಳೂರು , ಜುಲೈ 6: ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ನಾಲ್ಕನೇ ದಿನವೂ ಮುಂದುವರೆದಿದೆ. ಮೂಡುಬಿದ್ರೆ ಬಳಿಯ ನೆಲ್ಲಿಕಾರಿನ ಮಾಂಟ್ರಾಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತಪಟ್ಡವರು. ವಿಕಲ ಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು. ನಿನ್ನೆ ಸಂಜೆಯಿಂದ ಕಾಣೆಯಾಗಿದ್ದ ಬಗ್ಗೆ ಮನೆಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಇಂದು ಬೆಳಗ್ಗೆ ತೋಟದ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿರಂಜನ್ ತಂದೆ, ತಾಯಿ ತೀರಿಕೊಂಡಿದ್ದು ಸೋದರರು ಕೊರೊನಾ ಸಂದರ್ಭದಲ್ಲಿ ಸಾವಿಗೀಡಾಗಿದ್ದರು. ಆನಂತರ, ಭಾವನ ಅಂಗಡಿಯಲ್ಲಿ ಕೆಲಸ ಮಾಡುತ್ತ ಅವರ ಮನೆಯಲ್ಲೇ ವಾಸವಿದ್ದರು.

ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಬೈಲಾರೆ ಎಂಬಲ್ಲಿ ಭಾರೀ ಮಳೆಯ ಕಾರಣ ಮೂರು ಮನೆಗಳು ಜಲಾವೃತಗೊಂಡಿದೆ. ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ.
ಬಂಟ್ವಾಳದ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ಜಖಂಗೊಂಡಿದೆ. ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಓಮ್ನಿ ಕಾರನ್ನು ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಮಾವಿನ ಮರ ಓಮ್ನಿ ಕಾರಿನ ಮೇಲೆ ಉರುಳಿ ಬಿದ್ದಿದೆ. ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
Moodbidri heavy rains, Man dies after falling into lake. Three houses filled with rain water.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm