ಬ್ರೇಕಿಂಗ್ ನ್ಯೂಸ್
06-07-23 04:53 pm Mangalore Correspondent ಕರಾವಳಿ
ಮಂಗಳೂರು , ಜುಲೈ 6: ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ನಾಲ್ಕನೇ ದಿನವೂ ಮುಂದುವರೆದಿದೆ. ಮೂಡುಬಿದ್ರೆ ಬಳಿಯ ನೆಲ್ಲಿಕಾರಿನ ಮಾಂಟ್ರಾಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತಪಟ್ಡವರು. ವಿಕಲ ಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು. ನಿನ್ನೆ ಸಂಜೆಯಿಂದ ಕಾಣೆಯಾಗಿದ್ದ ಬಗ್ಗೆ ಮನೆಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಇಂದು ಬೆಳಗ್ಗೆ ತೋಟದ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿರಂಜನ್ ತಂದೆ, ತಾಯಿ ತೀರಿಕೊಂಡಿದ್ದು ಸೋದರರು ಕೊರೊನಾ ಸಂದರ್ಭದಲ್ಲಿ ಸಾವಿಗೀಡಾಗಿದ್ದರು. ಆನಂತರ, ಭಾವನ ಅಂಗಡಿಯಲ್ಲಿ ಕೆಲಸ ಮಾಡುತ್ತ ಅವರ ಮನೆಯಲ್ಲೇ ವಾಸವಿದ್ದರು.

ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಬೈಲಾರೆ ಎಂಬಲ್ಲಿ ಭಾರೀ ಮಳೆಯ ಕಾರಣ ಮೂರು ಮನೆಗಳು ಜಲಾವೃತಗೊಂಡಿದೆ. ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ.
ಬಂಟ್ವಾಳದ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ಜಖಂಗೊಂಡಿದೆ. ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಓಮ್ನಿ ಕಾರನ್ನು ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಮಾವಿನ ಮರ ಓಮ್ನಿ ಕಾರಿನ ಮೇಲೆ ಉರುಳಿ ಬಿದ್ದಿದೆ. ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
Moodbidri heavy rains, Man dies after falling into lake. Three houses filled with rain water.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm