ಬ್ರೇಕಿಂಗ್ ನ್ಯೂಸ್
03-11-20 01:16 pm Mangalore Correspondent ಕರಾವಳಿ
ಉಳ್ಳಾಲ, ನವಂಬರ್ 03 : ಹೇಳುವುದೊಂದು, ಮಾಡುವುದು ಇನ್ನೊಂದು ಅಂತಾರಲ್ಲ.. ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಕೇಸ್ ಹಾಕುವ ಟ್ರಾಫಿಕ್ ಪೊಲೀಸರೇ ಕಾನೂನು ಉಲ್ಲಂಘಿಸಿದ ಪ್ರಸಂಗ ತೊಕ್ಕೊಟ್ಟಿನಲ್ಲಿ ನಡೆದಿದೆ.
ತೊಕ್ಕೊಟ್ಟು ಮೇಲ್ಸೇತುವೆ ಕೊನೆಯಲ್ಲಿ ಇತ್ತೀಚೆಗೆ ಅಪಘಾತ ನಡೆದ ಬಳಿಕ ಟ್ರಾಫಿಕ್ ಪೊಲೀಸರು ನಿಗಾ ಇಟ್ಟಿದ್ದಾರೆ. ಅಬಳಿಕ ಉಳ್ಳಾಲಕ್ಕೆ ತಿರುಗುತ್ತಿದ್ದ ಪಾಸಿಂಗ್ ಸೌಲಭ್ಯವನ್ನು ಬಂದ್ ಮಾಡಿದ್ದು ಮುಂದೆ ಹೋಗಿ ತಿರುವು ಪಡೆಯಲು ಅವಕಾಶ ಕೊಡಲಾಗಿದೆ. ಹೀಗಾಗಿ ಉಳ್ಳಾಲದತ್ತ ಹೋಗುವ - ಬರುವ ಜನರು ಸಂಕಷ್ಟ ಪಡುತ್ತಿದ್ದಾರೆ.
ಈ ಮಧ್ಯೆ, ತೊಕ್ಕೊಟ್ಟು- ಕಾಪಿಕಾಡು ಹೆದ್ದಾರಿಯಲ್ಲಿ ( ಕೊಲ್ಯದಿಂದ- ತೊಕ್ಕೊಟ್ಟಿನ ಕಡೆಗೆ) ಪೊಲೀಸರ ವಾಹನ ವಿರುದ್ಧ ದಿಕ್ಕಿನಲ್ಲಿ ಚಲಿಸಿದೆ. ಜನಸಾಮಾನ್ಯರು ಇಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸಿದರೆ ಕಾನೂನು ಪಾಠ ಹೇಳುವ ಪೊಲೀಸರೇ ರೂಲ್ಸ್ ಬ್ರೇಕ್ ಮಾಡಿರುವುದನ್ನ ಕಂಡ ಜನರು ಜನರಿಗೊಂದು, ಪೊಲೀಸರಿಗೊಂದು ಕಾನೂನೇ ಎಂದು ಪ್ರಶ್ನಿಸುವಂತಾಗಿದೆ.


ತೊಕ್ಕೊಟ್ಟು ಓವರ್ ಬ್ರಿಡ್ಜ್ ಕಡೆಯಿಂದ ಎರಡನೇ ಕೊಲ್ಯದ ವರೆಗಿನ ಸುಮಾರು 2 ಕಿ.ಮೀ ರಸ್ತೆಯಲ್ಲಿ ವಾಹನಗಳು ಹೆದ್ದಾರಿ ಕ್ರಾಸ್ ಮಾಡಲು ಯಾವುದೇ ತಿರುವುಗಳಿಲ್ಲ. ಸಂಬಂಧ ಪಟ್ಟ ನವಯುಗ ಕನ್ಸ್ಟ್ರಕ್ಷನ್ ಕಂಪನಿಯವರು ಇದುವರೆಗೂ ಇಲ್ಲಿ ಸರ್ವಿಸ್ ರಸ್ತೆ ನಿರ್ಮಿಸಿಲ್ಲ. ಪರಿಣಾಮ ಕೊಲ್ಯದಿಂದ- ಓವರ್ ಬ್ರಿಡ್ಜ್ ನ ನಡುವೆ ಓಡಾಡುವ ವಾಹನ ಸವಾರರು ಸಮಯದ ಅಭಾವದಿಂದಲೋ, ದುಬಾರಿ ಇಂಧನ ಉಳಿಸುವ ಆಸೆಯಿಂದಲೋ ಇಲ್ಲಿ ನಿತ್ಯವೂ ರಾಂಗ್ ಸೈಡ್ ನಿಂದ ಸಂಚರಿಸಿ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ದು ಫೈನ್ ಕಟ್ಟಿಸಿಕೊಳ್ತಾರೆ.
ಈ ಪ್ರದೇಶದಲ್ಲಿ ಸರ್ವಿಸ್ ರಸ್ತೆ ಇಲ್ಲದೇ ಇರುವುದೇ ವಾಹನ ಸವಾರರು ರಾಂಗ್ ಸೈಡ್ ಚಲಿಸಲು ಮುಖ್ಯ ಕಾರಣವಾಗಿದ್ದರೂ, ಪೊಲೀಸರು ಸಂಬಂಧ ಪಟ್ಟ ನವಯುಗ ಕಂಪನಿಯ ವಿರುದ್ಧ ಕೇಸ್ ಹಾಕುವ ಧೈರ್ಯ ಮಾಡದೆ ಬಡ ವಾಹನ ಸವಾರರ ಮೇಲೆ ಫೈನ್ ಹಾಕಿ ದರ್ಪ ತೋರಿಸುತ್ತಾರೆ !
ಇಂದು ಟ್ರಾಫಿಕ್ ಪೊಲೀಸರೇ ಈ ರಸ್ತೆಯಲ್ಲಿ ರಾಂಗ್ ಸೈಡಲ್ಲಿ ಸಂಚರಿಸಿ, ಟ್ರಾಫಿಕ್ ಉಲ್ಲಂಘಿಸುವ ಮಂದಿಗೆ ಮಾದರಿಯಾಗಿದ್ದಾರೆ !!
A Traffic Police Jeep violating traffic rules by going on the opposite direction at Thokottu near the bridge has gone viral on social media.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm