ಬ್ರೇಕಿಂಗ್ ನ್ಯೂಸ್
03-11-20 01:16 pm Mangalore Correspondent ಕರಾವಳಿ
ಉಳ್ಳಾಲ, ನವಂಬರ್ 03 : ಹೇಳುವುದೊಂದು, ಮಾಡುವುದು ಇನ್ನೊಂದು ಅಂತಾರಲ್ಲ.. ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಕೇಸ್ ಹಾಕುವ ಟ್ರಾಫಿಕ್ ಪೊಲೀಸರೇ ಕಾನೂನು ಉಲ್ಲಂಘಿಸಿದ ಪ್ರಸಂಗ ತೊಕ್ಕೊಟ್ಟಿನಲ್ಲಿ ನಡೆದಿದೆ.
ತೊಕ್ಕೊಟ್ಟು ಮೇಲ್ಸೇತುವೆ ಕೊನೆಯಲ್ಲಿ ಇತ್ತೀಚೆಗೆ ಅಪಘಾತ ನಡೆದ ಬಳಿಕ ಟ್ರಾಫಿಕ್ ಪೊಲೀಸರು ನಿಗಾ ಇಟ್ಟಿದ್ದಾರೆ. ಅಬಳಿಕ ಉಳ್ಳಾಲಕ್ಕೆ ತಿರುಗುತ್ತಿದ್ದ ಪಾಸಿಂಗ್ ಸೌಲಭ್ಯವನ್ನು ಬಂದ್ ಮಾಡಿದ್ದು ಮುಂದೆ ಹೋಗಿ ತಿರುವು ಪಡೆಯಲು ಅವಕಾಶ ಕೊಡಲಾಗಿದೆ. ಹೀಗಾಗಿ ಉಳ್ಳಾಲದತ್ತ ಹೋಗುವ - ಬರುವ ಜನರು ಸಂಕಷ್ಟ ಪಡುತ್ತಿದ್ದಾರೆ.
ಈ ಮಧ್ಯೆ, ತೊಕ್ಕೊಟ್ಟು- ಕಾಪಿಕಾಡು ಹೆದ್ದಾರಿಯಲ್ಲಿ ( ಕೊಲ್ಯದಿಂದ- ತೊಕ್ಕೊಟ್ಟಿನ ಕಡೆಗೆ) ಪೊಲೀಸರ ವಾಹನ ವಿರುದ್ಧ ದಿಕ್ಕಿನಲ್ಲಿ ಚಲಿಸಿದೆ. ಜನಸಾಮಾನ್ಯರು ಇಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸಿದರೆ ಕಾನೂನು ಪಾಠ ಹೇಳುವ ಪೊಲೀಸರೇ ರೂಲ್ಸ್ ಬ್ರೇಕ್ ಮಾಡಿರುವುದನ್ನ ಕಂಡ ಜನರು ಜನರಿಗೊಂದು, ಪೊಲೀಸರಿಗೊಂದು ಕಾನೂನೇ ಎಂದು ಪ್ರಶ್ನಿಸುವಂತಾಗಿದೆ.


ತೊಕ್ಕೊಟ್ಟು ಓವರ್ ಬ್ರಿಡ್ಜ್ ಕಡೆಯಿಂದ ಎರಡನೇ ಕೊಲ್ಯದ ವರೆಗಿನ ಸುಮಾರು 2 ಕಿ.ಮೀ ರಸ್ತೆಯಲ್ಲಿ ವಾಹನಗಳು ಹೆದ್ದಾರಿ ಕ್ರಾಸ್ ಮಾಡಲು ಯಾವುದೇ ತಿರುವುಗಳಿಲ್ಲ. ಸಂಬಂಧ ಪಟ್ಟ ನವಯುಗ ಕನ್ಸ್ಟ್ರಕ್ಷನ್ ಕಂಪನಿಯವರು ಇದುವರೆಗೂ ಇಲ್ಲಿ ಸರ್ವಿಸ್ ರಸ್ತೆ ನಿರ್ಮಿಸಿಲ್ಲ. ಪರಿಣಾಮ ಕೊಲ್ಯದಿಂದ- ಓವರ್ ಬ್ರಿಡ್ಜ್ ನ ನಡುವೆ ಓಡಾಡುವ ವಾಹನ ಸವಾರರು ಸಮಯದ ಅಭಾವದಿಂದಲೋ, ದುಬಾರಿ ಇಂಧನ ಉಳಿಸುವ ಆಸೆಯಿಂದಲೋ ಇಲ್ಲಿ ನಿತ್ಯವೂ ರಾಂಗ್ ಸೈಡ್ ನಿಂದ ಸಂಚರಿಸಿ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ದು ಫೈನ್ ಕಟ್ಟಿಸಿಕೊಳ್ತಾರೆ.
ಈ ಪ್ರದೇಶದಲ್ಲಿ ಸರ್ವಿಸ್ ರಸ್ತೆ ಇಲ್ಲದೇ ಇರುವುದೇ ವಾಹನ ಸವಾರರು ರಾಂಗ್ ಸೈಡ್ ಚಲಿಸಲು ಮುಖ್ಯ ಕಾರಣವಾಗಿದ್ದರೂ, ಪೊಲೀಸರು ಸಂಬಂಧ ಪಟ್ಟ ನವಯುಗ ಕಂಪನಿಯ ವಿರುದ್ಧ ಕೇಸ್ ಹಾಕುವ ಧೈರ್ಯ ಮಾಡದೆ ಬಡ ವಾಹನ ಸವಾರರ ಮೇಲೆ ಫೈನ್ ಹಾಕಿ ದರ್ಪ ತೋರಿಸುತ್ತಾರೆ !
ಇಂದು ಟ್ರಾಫಿಕ್ ಪೊಲೀಸರೇ ಈ ರಸ್ತೆಯಲ್ಲಿ ರಾಂಗ್ ಸೈಡಲ್ಲಿ ಸಂಚರಿಸಿ, ಟ್ರಾಫಿಕ್ ಉಲ್ಲಂಘಿಸುವ ಮಂದಿಗೆ ಮಾದರಿಯಾಗಿದ್ದಾರೆ !!
A Traffic Police Jeep violating traffic rules by going on the opposite direction at Thokottu near the bridge has gone viral on social media.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm