ಬ್ರೇಕಿಂಗ್ ನ್ಯೂಸ್
07-07-23 08:44 pm Mangalore Correspondent ಕರಾವಳಿ
ಮಂಗಳೂರು, ಜುಲೈ 7: ಅನುದಾನಿತ ಶಾಲೆಯ ನಿವೃತ್ತ ಶಿಕ್ಷಕಿಯೊಬ್ಬರಿಗೆ ಪಿಂಚಣಿ ಹಣ ಪಡೆಯಲು ಅಗತ್ಯ ದಾಖಲೆ ನೀಡಬೇಕಿದ್ದರೆ ಐದು ಲಕ್ಷ ರೂ. ನೀಡಬೇಕೆಂದು ಸತಾಯಿಸಿ ಲಂಚದ ಹಣಕ್ಕೆ ಕೈಯೊಡ್ಡಿದ ಶಾಲಾ ಸಂಚಾಲಕಿಯನ್ನು ರೆಡ್ ಹ್ಯಾಂಡ್ ಆಗಿಯೇ ಮಂಗಳೂರು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ಬಜ್ಪೆ ಸುಂಕದಕಟ್ಟೆ ನಿರಂಜನ ಸ್ವಾಮಿ ಸರ್ಕಾರಿ ಅನುದಾನಿತ ಶಾಲೆಯ ಸಂಚಾಲಕಿ ಜ್ಯೋತಿ ಎನ್. ಪೂಜಾರಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದವರು. ಸುಂಕದಕಟ್ಟೆಯ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಹಾಗು ಮುಖ್ಯ ಶಿಕ್ಷಕಿಯಾಗಿ 42 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶೋಭಾರಾಣಿ, ಇದೇ ಜುಲೈ 31 ರಂದು ವಯೋನಿವೃತ್ತಿ ಹೊಂದಲಿದ್ದು, ನಿವೃತ್ತಿ ಕಾಲದ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುವಂತೆ ಕಳೆದ ಮೇ 25ರಂದು ಶಾಲೆಯ ಮ್ಯಾನೇಜ್ಮೆಂಟ್ ಸಂಚಾಲಕಿ ಜ್ಯೋತಿ ಎನ್. ಪೂಜಾರಿ ಅವರಲ್ಲಿ ವಿನಂತಿಸಿದ್ದರು.
ಆದರೆ, ಶಾಲಾ ಸಂಚಾಲಕಿ ಪಿಂಚಣಿ ಉಪದಾನ ಪತ್ರಗಳನ್ನು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸದೇ, ಸ್ವೀಕೃತಿ ಪತ್ರವನ್ನು ನೀಡದೇ ಫಿರ್ಯಾದಿದಾರರಿಗೆ ಸತಾಯಿಸಿದ್ದರು. ಪಿಂಚಣಿ ಪತ್ರಗಳಿಗೆ ಸಹಿ ಹಾಕಿ ಕಳುಹಿಸಬೇಕಿದ್ದರೆ ರೂ. 20 ಲಕ್ಷ ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು. ಶಿಕ್ಷಕಿ ಶೋಭಾರಾಣಿ ಮತ್ತೊಮ್ಮೆ ಸಂಚಾಲಕಿ ಜ್ಯೋತಿ ಅವರನ್ನು ಭೇಟಿ ಮಾಡಿ ಕೋರಿಕೆ ಸಲ್ಲಿಸಿದರೂ, ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡದೆ ರೂ.5 ಲಕ್ಷ ಕೊಡಲೇಬೇಕು ಎಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಬೇಸತ್ತ ಶಿಕ್ಷಕಿ ಮಂಗಳೂರಿನ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅಧಿಕಾರಿಗಳ ಸೂಚನೆಯಂತೆ ಇಂದು ಶಿಕ್ಷಕಿ ಶೋಭಾರಾಣಿ, 5 ಲಕ್ಷ ಮೊತ್ತವನ್ನು ಶಾಲಾ ಸಂಚಾಲಕಿಗೆ ನೀಡುತ್ತಿರುವಾಗಲೇ ಲೋಕಾಯುಕ್ತ ದಾಳಿ ನಡೆಸಿದೆ. ಆರೋಪಿ ಜ್ಯೋತಿ ಪೂಜಾರಿ ಅವರನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಲೋಕಾಯುಕ್ತ ಎಸ್ಪಿ ಸಿಎ ಸೈಮನ್ ನೇತೃತ್ವದಲ್ಲಿ ಡಿವೈಎಸ್ಪಿ ಕಲಾವತಿ, ಚೆಲುವರಾಜು, ಇನ್ಸ್ ಪೆಕ್ಟರ್ ವಿನಾಯಕ ಬಿಲ್ಲವ ಆರೋಪಿಯನ್ನು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.
Mangalore Government school coordinator arrested by Lokayukta over bribe of 5 lakhs to deliver pension documents. The arrested has been identified as Jyothi Poojari who works at Bajpe Sukadakatte school.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm