ಬ್ರೇಕಿಂಗ್ ನ್ಯೂಸ್
03-11-20 01:55 pm Mangalore Correspondent ಕರಾವಳಿ
ಪುತ್ತೂರು, ನವೆಂಬರ್ 03: ಪುತ್ತೂರು ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಕೆ. ಜೀವಂಧರ್ ಜೈನ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ವಿದ್ಯಾ ಆರ್. ಗೌರಿ ಅವಿರೋಧ ಆಯ್ಕೆಯಾಗಿದ್ದಾರೆ. ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ನಗರಸಭಾ ಪೌರಾಯುಕ್ತೆ ರೂಪಾ ಟಿ ಶೆಟ್ಟಿ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.
31 ಸದಸ್ಯ ಬಲದ ಪುತ್ತೂರು ನಗರಸಭೆಯಲ್ಲಿ 25 ಬಿಜೆಪಿ, 5 ಕಾಂಗ್ರೆಸ್ ಹಾಗೂ ಓರ್ವ ಎಸ್ಡಿಪಿಐ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಜೀವಂಧರ್ ಜೈನ್ ಮತ್ತು ಕಾಂಗ್ರೆಸ್ನಿಂದ ರಾಬಿನ್ ತಾವ್ರೋ ಸ್ಪರ್ಧಿಸಿದ್ದರು. ಜೀವಂಧರ್ ಜೈನ್ ಅವರು ಶಾಸಕರ, ಸಂಸದರ ಮತಗಳು ಸೇರಿದಂತೆ ಒಟ್ಟು 27 ಮತಗಳನ್ನು ಪಡೆದು ವಿಜಯ ಸಾಧಿಸಿದರು. ರಾಬಿನ್ ತಾವ್ರೋ ಅವರಿಗೆ 3 ಮತಗಳು ಲಭಿಸಿದವು. ಕಾಂಗ್ರೆಸಿನ ಇಬ್ಬರು ಸದಸ್ಯರು ಗೈರು ಹಾಜರಾಗಿದ್ದರು. ಎಸ್ಡಿಪಿಐ ಸದಸ್ಯೆ ತಟಸ್ಥರಾಗಿದ್ದರು. ಉಪಾಧ್ಯಕ್ಷರಾಗಿ ಕಾಂಗ್ರೆಸ್ನಿಂದ ಯಾರೂ ಸ್ಪರ್ಧಿಸದ ಹಿನ್ನಲೆಯಲ್ಲಿ ಬಿಜೆಪಿಯ ವಿದ್ಯಾಗೌರಿ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯ ಬಳಿಕ ನಡೆದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್ ಕುಮಾರ್ ಮತ್ತು ಶಾಸಕ ಸಂಜೀವ ಮಠಂದೂರು ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭ ಹಾರೈಸಿದರು. ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮುಂದಾಳುಗಳಾದ ಗೋಪಾಲಕೃಷ್ಣ ಹೇರಳೆ, ಎಸ್. ಅಪ್ಪಯ್ಯ ಮಣಿಯಾಣಿ, ಆರ್.ಸಿ. ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.
K Jeevandhar Jain of the BJP was elected as the president of Puttur city municipality while Vidya R Gowri of the same party was elected unopposed to the post of the vice president on Monday November 2.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am