ಬ್ರೇಕಿಂಗ್ ನ್ಯೂಸ್
11-07-23 11:56 am Mangalore Correspondent ಕರಾವಳಿ
ಉಳ್ಳಾಲ, ಜು.11: ನಸುಕಿನ ವೇಳೆ ಬಡಿದ ಭಾರೀ ಶಬ್ದದ ಸಿಡಿಲು ಉಳ್ಳಾಲದ ರಾಣಿಪುರದಲ್ಲಿ ಅಪ್ಪಳಿಸಿದ್ದು ಜಿನಸಿ ಅಂಗಡಿಯೊಂದು ಸುಟ್ಟು ಭಸ್ಮವಾಗಿದೆ. ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ.
ಮುನ್ನೂರು ಗ್ರಾಮದ ರಾಣಿಪುರ ಚರ್ಚ್ ಎದುರಿನ ಪೀಟರ್ ಆಪೊಸು ಎಂಬವರ ಜಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ. ನಸುಕಿನ ನಾಲ್ಕು ಗಂಟೆ ವೇಳೆಗೆ ಭಾರೀ ಸಿಡಿಲು, ಮಿಂಚು ಉಂಟಾಗಿತ್ತು. ಘಟನೆ ವೇಳೆ ಪೀಟರ್ ತನ್ನ ಪತ್ನಿ ಅಸುಂತ ಮರಿಯ ಡಿಕ್ರೂಜ್ ಮತ್ತು ಮಗ ಪ್ರೀತಮ್ ಜೊತೆ ಮನೆಯಲ್ಲಿ ಗಾಢ ನಿದ್ರೆಯಲ್ಲಿದ್ದರು. ರಸ್ತೆಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರು ಅಂಗಡಿಗೆ ಬೆಂಕಿ ಬಿದ್ದಿರುವುದನ್ನ ಕಂಡು ಮನೆ ಮಂದಿಗೆ ತಿಳಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೀಟರ್ ಕುಟುಂಬ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿಗಳು ಮನೆಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನ ನಂದಿಸಿದ್ದಾರೆ.





ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಜಿನಸಿ ದಾಸ್ತಾನು ಸುಟ್ಟು ಕರಕಲಾಗಿದ್ದು ಮೂರು ರೆಫ್ರಿಜರೇಟರ್ ಸುಟ್ಟು ಹೋಗಿವೆ. ಇಲೆಕ್ಟ್ರಾನಿಕ್ ಉಪಕರಣಗಳು ಕೆಟ್ಟು ಹೋಗಿವೆ. ಅಂಗಡಿ, ಮನೆ ಒಟ್ಟಿಗೆ ಇದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಲ್ಫ್ರೆಡ್ ಡಿ ಸೋಜ, ಮಾಜಿ ಉಪಾಧ್ಯಕ್ಷ ನವೀನ್ ಡಿ ಸೋಜಾ, ಕಂದಾಯ ನಿರೀಕ್ಷರು, ಗ್ರಾಮಲೆಕ್ಕಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Provision store shop gutted in Ranipura Thokottu due to lightning in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm