ಬ್ರೇಕಿಂಗ್ ನ್ಯೂಸ್
11-07-23 11:56 am Mangalore Correspondent ಕರಾವಳಿ
ಉಳ್ಳಾಲ, ಜು.11: ನಸುಕಿನ ವೇಳೆ ಬಡಿದ ಭಾರೀ ಶಬ್ದದ ಸಿಡಿಲು ಉಳ್ಳಾಲದ ರಾಣಿಪುರದಲ್ಲಿ ಅಪ್ಪಳಿಸಿದ್ದು ಜಿನಸಿ ಅಂಗಡಿಯೊಂದು ಸುಟ್ಟು ಭಸ್ಮವಾಗಿದೆ. ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ.
ಮುನ್ನೂರು ಗ್ರಾಮದ ರಾಣಿಪುರ ಚರ್ಚ್ ಎದುರಿನ ಪೀಟರ್ ಆಪೊಸು ಎಂಬವರ ಜಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ. ನಸುಕಿನ ನಾಲ್ಕು ಗಂಟೆ ವೇಳೆಗೆ ಭಾರೀ ಸಿಡಿಲು, ಮಿಂಚು ಉಂಟಾಗಿತ್ತು. ಘಟನೆ ವೇಳೆ ಪೀಟರ್ ತನ್ನ ಪತ್ನಿ ಅಸುಂತ ಮರಿಯ ಡಿಕ್ರೂಜ್ ಮತ್ತು ಮಗ ಪ್ರೀತಮ್ ಜೊತೆ ಮನೆಯಲ್ಲಿ ಗಾಢ ನಿದ್ರೆಯಲ್ಲಿದ್ದರು. ರಸ್ತೆಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರು ಅಂಗಡಿಗೆ ಬೆಂಕಿ ಬಿದ್ದಿರುವುದನ್ನ ಕಂಡು ಮನೆ ಮಂದಿಗೆ ತಿಳಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೀಟರ್ ಕುಟುಂಬ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿಗಳು ಮನೆಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನ ನಂದಿಸಿದ್ದಾರೆ.





ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಜಿನಸಿ ದಾಸ್ತಾನು ಸುಟ್ಟು ಕರಕಲಾಗಿದ್ದು ಮೂರು ರೆಫ್ರಿಜರೇಟರ್ ಸುಟ್ಟು ಹೋಗಿವೆ. ಇಲೆಕ್ಟ್ರಾನಿಕ್ ಉಪಕರಣಗಳು ಕೆಟ್ಟು ಹೋಗಿವೆ. ಅಂಗಡಿ, ಮನೆ ಒಟ್ಟಿಗೆ ಇದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಲ್ಫ್ರೆಡ್ ಡಿ ಸೋಜ, ಮಾಜಿ ಉಪಾಧ್ಯಕ್ಷ ನವೀನ್ ಡಿ ಸೋಜಾ, ಕಂದಾಯ ನಿರೀಕ್ಷರು, ಗ್ರಾಮಲೆಕ್ಕಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Provision store shop gutted in Ranipura Thokottu due to lightning in Mangalore.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am