ಬ್ರೇಕಿಂಗ್ ನ್ಯೂಸ್
11-07-23 11:56 am Mangalore Correspondent ಕರಾವಳಿ
ಉಳ್ಳಾಲ, ಜು.11: ನಸುಕಿನ ವೇಳೆ ಬಡಿದ ಭಾರೀ ಶಬ್ದದ ಸಿಡಿಲು ಉಳ್ಳಾಲದ ರಾಣಿಪುರದಲ್ಲಿ ಅಪ್ಪಳಿಸಿದ್ದು ಜಿನಸಿ ಅಂಗಡಿಯೊಂದು ಸುಟ್ಟು ಭಸ್ಮವಾಗಿದೆ. ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ.
ಮುನ್ನೂರು ಗ್ರಾಮದ ರಾಣಿಪುರ ಚರ್ಚ್ ಎದುರಿನ ಪೀಟರ್ ಆಪೊಸು ಎಂಬವರ ಜಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ. ನಸುಕಿನ ನಾಲ್ಕು ಗಂಟೆ ವೇಳೆಗೆ ಭಾರೀ ಸಿಡಿಲು, ಮಿಂಚು ಉಂಟಾಗಿತ್ತು. ಘಟನೆ ವೇಳೆ ಪೀಟರ್ ತನ್ನ ಪತ್ನಿ ಅಸುಂತ ಮರಿಯ ಡಿಕ್ರೂಜ್ ಮತ್ತು ಮಗ ಪ್ರೀತಮ್ ಜೊತೆ ಮನೆಯಲ್ಲಿ ಗಾಢ ನಿದ್ರೆಯಲ್ಲಿದ್ದರು. ರಸ್ತೆಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರು ಅಂಗಡಿಗೆ ಬೆಂಕಿ ಬಿದ್ದಿರುವುದನ್ನ ಕಂಡು ಮನೆ ಮಂದಿಗೆ ತಿಳಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೀಟರ್ ಕುಟುಂಬ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿಗಳು ಮನೆಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನ ನಂದಿಸಿದ್ದಾರೆ.





ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಜಿನಸಿ ದಾಸ್ತಾನು ಸುಟ್ಟು ಕರಕಲಾಗಿದ್ದು ಮೂರು ರೆಫ್ರಿಜರೇಟರ್ ಸುಟ್ಟು ಹೋಗಿವೆ. ಇಲೆಕ್ಟ್ರಾನಿಕ್ ಉಪಕರಣಗಳು ಕೆಟ್ಟು ಹೋಗಿವೆ. ಅಂಗಡಿ, ಮನೆ ಒಟ್ಟಿಗೆ ಇದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಲ್ಫ್ರೆಡ್ ಡಿ ಸೋಜ, ಮಾಜಿ ಉಪಾಧ್ಯಕ್ಷ ನವೀನ್ ಡಿ ಸೋಜಾ, ಕಂದಾಯ ನಿರೀಕ್ಷರು, ಗ್ರಾಮಲೆಕ್ಕಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Provision store shop gutted in Ranipura Thokottu due to lightning in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm