ಬ್ರೇಕಿಂಗ್ ನ್ಯೂಸ್
12-07-23 02:15 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 12: ದೈವದ ಜಾಗದ ವಿಚಾರದಲ್ಲಿ ತಗಾದೆ ನಡೆದು ಕೊರಗಜ್ಜನ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಸನಿಹದ ಬಾಡಾರುವಿನಲ್ಲಿ ನಡೆದಿದೆ.
ಬಾಡಾರಿನ ಕೊರಗಕಲ್ಲು ಎಂಬಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಯ ವಿಚಾರದಲ್ಲಿ ನಡೆದ ಗಲಾಟೆ ತಾರಕಕ್ಕೇರಿ, ಗುಡಿಯ ಬದಿಯಲ್ಲಿರುವ ನಿವಾಸಿ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾನೆ.
ಸಾರ್ವಜನಿಕರು ಸ್ವಾಮಿ ಕೊರಗಜ್ಜ ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನಿಗೆ ಕೋಲ, ಅಗೇಲು ನೀಡಿ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿಯಿರುವ ಸ್ಥಳದ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ಅದು ತನ್ನ ಜಾಗವೆಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಸ್ವಾಮಿ ಕೊರಗಜ್ಜ ಸಮಿತಿ ಹಾಗೂ ಈ ವ್ಯಕ್ತಿಯ ನಡುವೆ ತಗಾದೆ ಏರ್ಪಟ್ಟಿತ್ತು. ಇಲ್ಲಿ ಆರಾಧನೆಗೆ ಅವಕಾಶ ನೀಡುವುದಿಲ್ಲ ಎಂದು ಆ ವ್ಯಕ್ತಿ ಅಡ್ಡಿ ಪಡಿಸುತ್ತಿದ್ದರು. ಆದರೆ ಪ್ರತೀ ವರ್ಷವರ್ಷ ತಗಾದೆ ಏರ್ಪಟ್ಟಾಗ ಸಂಧಾನವಾಗಿ ಕೊನೆಗೆ ಆರಾಧನೆ ನಡೆಯುತ್ತಿತ್ತು.
ಇದೀಗ ಅಲ್ಲಿಯೇ ಮತ್ತೊಂದು ಕೊರಗಜ್ಜನ ಗುಡಿ ಕಟ್ಟಲು ವ್ಯವಸ್ಥೆ ಮಾಡಿದ್ದರು. ಆದರೆ ಆ ವ್ಯಕ್ತಿ ಇದಕ್ಕೂ ಆಕ್ಷೇಪ ವ್ಯಕ್ತಪಡಿಸಿದಾಗ ಸಮಿತಿಯವರು ಪೊಲೀಸ್ ದೂರು ದಾಖಲಿಸಿದ್ದರು.
ಇದರಿಂದ ಆಕ್ರೋಶಿತ ಸ್ಥಳೀಯ ವ್ಯಕ್ತಿ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೊರಗಜ್ಜನ ಗುಡಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಈ ಕುರಿತು ಸ್ವಾಮಿ ಕೊರಗಜ್ಜ ಸಮಿತಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಮೇಲೆ ಕ್ರಮ ಕೈಗೊಂಡು ಅದೇ ಸ್ಥಳದಲ್ಲಿ ಕೊರಗಜ್ಜನ ಗುಡಿಯ ಪುನರ್ ನಿರ್ಮಾಣ ಮಾಡಿ ಆರಾಧನೆ ನಡೆಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.
Mangalore Land dispute fight, man sets Koragajja Sannidhi in fire at Venur, Belthangady.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm