ಬ್ರೇಕಿಂಗ್ ನ್ಯೂಸ್
12-07-23 07:21 pm Mangalore Correspondent ಕರಾವಳಿ
ಉಳ್ಳಾಲ, ಜು.12: ಸಾವಿರಾರು ವಿದ್ಯಾರ್ಥಿಗಳು ಜ್ಞಾನಾರ್ಜನೆಗೈಯುತ್ತಿರುವ ಶಾಲೆಯ ಆವರಣದ ಪಕ್ಕದಲ್ಲೇ ಬಾರ್ & ರೆಸ್ಟೋರೆಂಟ್ ಒಂದು ದಿಢೀರನೆ ಹೆಡೆ ಎತ್ತಿದ್ದು ಮದ್ಯ ಕೇಂದ್ರವನ್ನು ಸ್ಥಳಾಂತರಿಸುವಂತೆ ವಿದ್ಯಾರ್ಥಿಗಳು ಜಿಟಿ, ಜಿಟಿ ಮಳೆಯ ನಡುವಲ್ಲೂ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಳೆಪುಣಿ ಗ್ರಾಮದ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದ ಆವರಣದ ಬಳಿಯಲ್ಲೇ ಬಾರ್& ರೆಸ್ಟೋರೆಂಟ್ ನಿರ್ಮಾಣಗೊಂಡಿದ್ದು, ನಿಯಮಗಳನ್ನು ಗಾಳಿಗೆ ತೂರಿ ಈ ಬಾರಿಗೆ ಸ್ಥಳೀಯ ಪಂಚಾಯತ್ ಆಡಳಿತವು ನಿರಾಕ್ಷೇಪಣಾ ಪತ್ರ ನೀಡಿರುವುದಾಗಿ ಆರೋಪಗಳು ಕೇಳಿಬಂದಿವೆ. ಬಾರ್ ಅನ್ನು ಕೂಡಲೇ ಸ್ಥಳಾಂತರಿಸುವಂತೆ ಆಗ್ರಹಿಸಿ ಶಾರದಾ ವಿದ್ಯಾಗಣಪತಿ ಶಾಲೆಯ ನೂರಾರು ವಿದ್ಯಾರ್ಥಿಗಳು ಬಾಳೆಪುಣಿ ಪಂಚಾಯತ್ ಗೆ ಮುತ್ತಿಗೆ ಹಾಕಿ ಪಂಚಾಯತ್ ಅಧ್ಯಕ್ಷೆ ರಝಿಯಾ ಅವರಿಗೆ ಮನವಿ ಸಲ್ಲಿಸಿದರು.



ಶಾರದಾ ವಿದ್ಯಾಗಣಪತಿ ಶಾಲಾ ವಿದ್ಯಾರ್ಥಿನಿ ರಶ್ಮಿತಾ ಮಾತನಾಡಿ ಶಾಲಾ ಆವರಣದ ನೂರು ಮೀಟರ್ ವ್ಯಾಪ್ತಿಯೊಳಗಡೆ ಯಾವುದೇ ಮಾದಕ ಪದಾರ್ಥಗಳನ್ನ ಮಾರುವಂತಿಲ್ಲ ಎಂದು ಕಾನೂನು ಇದೆ. ಆದರೆ ಇಲ್ಲಿ ನಿಯಮಗಳನ್ನೆಲ್ಲ ಉಲ್ಲಂಘಿಸಿ ಬಾರ್ ನಿರ್ಮಿಸಲಾಗಿದ್ದು ಇದರಿಂದ ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರೋದು ಖಂಡಿತ ಎಂದಳು.


ಶಾರದಾ ಗಣಪತಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ.ರಾಜಾರಾಂ ಭಟ್ ಮಾತನಾಡಿ ಸರಕಾರದ ಮಾರ್ಗಸೂಚಿಗಳನ್ನ ಅವಗಣನೆ ಮಾಡಿ, ಸಾರ್ವಜನಿಕ ಆಕ್ಷೇಪಗಳಿಗೆ ಅವಕಾಶ ನೀಡದೆ ಪಂಚಾಯತ್ ಆಡಳಿತವು ಬಾರ್ ನಿರ್ಮಾಣಕ್ಕೆ ತರಾತುರಿಯಲ್ಲಿ ನಿರಾಕ್ಷೇಪಣಾ ಪತ್ರ ನೀಡಿರುವುದು ಖಂಡನೀಯ. ಸರಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಆವರಣದ 100 ಮೀಟರ್ ಅಂತರದೊಳಗೆ ಮದ್ಯದಂಗಡಿ ತೆರೆಯಲು ಅವಕಾಶ ಇರೋದಿಲ್ಲ. ಇಲ್ಲಿ ಶಾಲಾ ದ್ವಾರದ 53 ಮೀಟರ್ ಮತ್ತು ಶಾಲಾ ಆವರಣದ 13 ಮೀಟರ್ ಅಂತರದಲ್ಲಿ ಬಾರ್ ನಿರ್ಮಿಸಿ ನಿಯಮಗಳನ್ನ ಗಾಳಿಗೆ ತೂರಲಾಗಿದೆ. ಪಂಚಾಯತ್ ಅಧ್ಯಕ್ಷರು ಮುಂದಿನ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಬಾರ್ ಸ್ಥಳಾಂತರಿಸದಿದ್ದರೆ ಮುಂದೆ ಪ್ರಜಾಪ್ರಭುತ್ವದಡಿಯ ಎಲ್ಲಾ ಹೋರಾಟಕ್ಕೂ ಶಾಲಾಡಳಿತ ತಯಾರಾಗಿದೆ ಎಂದರು. ವಿವಾದಿತ ಬಾರ್ & ರೆಸ್ಟೋರೆಂಟ್ ಮುಂದೆಯೂ ಜಮಾಯಿಸಿದ ವಿದ್ಯಾರ್ಥಿಗಳು ತಮ್ಮ ಆಕ್ರೋಶ ಹೊರ ಹಾಕಿದರು.
Mangalore Permission to open Bar and Restaurant opposite to Sharadha school, students Ghearo Balepuni Gram Panchayat opposing to cancel the permission. Students Ghearo office amid heavy rains.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm