ಬ್ರೇಕಿಂಗ್ ನ್ಯೂಸ್
12-07-23 10:40 pm Mangalore Correspondent ಕರಾವಳಿ
ಮಂಗಳೂರು, ಜುಲೈ 12: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತನ್ನ ವಿರುದ್ಧ ದಾಖಲಾದ ಎಫ್ಐಆರ್ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಮಂಗಳೂರಿನ ಮಹಿಳಾ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಮತ್ತು ಮಂಗಳೂರಿನ ಜೆಎಂಎಫ್ ಕೋರ್ಟಿನಲ್ಲಿ ನಡೆಯುತ್ತಿರುವ ವಿಚಾರಣೆ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಆರೋಪಿ ವಕೀಲ ಕೆಎಸ್ಎನ್ ರಾಜೇಶ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಸ್ಟಿಸಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ಸಂತ್ರಸ್ತ ವಿದ್ಯಾರ್ಥಿನಿ ಮತ್ತು ದೂರುದಾರರ ಅಹವಾಲು ಆಲಿಸಿದ ಬಳಿಕ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಕಾನೂನು ವಿದ್ಯಾರ್ಥಿನಿಯೊಬ್ಬಳು ಕಲಿಯುವುದಕ್ಕಾಗಿ ವಕೀಲರ ಕಚೇರಿಗೆ ಬಂದಿದ್ದಾಗ ಈ ರೀತಿಯ ಘಟನೆ ಆಗಿರುವುದು ಆಕೆಯ ವೃತ್ತಿ ಮತ್ತು ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇಲ್ಲಿ ಆರೋಪಿ ವಕೀಲ ಗುರುವಿನ ಸ್ಥಾನದಲ್ಲಿರುತ್ತಾನೆ. ನಂಬಿಕೆಯಿಟ್ಟು ವಿದ್ಯಾರ್ಥಿನಿ ಆತನ ಬಳಿ ಕಲಿಯಲು ಬರುತ್ತಾಳೆ. ಇಂತಹ ಸಮಯದಲ್ಲಿ ಇಡೀ ಪ್ರಕರಣವನ್ನು ರದ್ದುಗೊಳಿಸುವುದು ಈ ರೀತಿಯ ದುಷ್ಕೃತ್ಯಗಳನ್ನು ಬೆಂಬಲಿಸಿದಂತಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
2021ರ ಆಗಸ್ಟ್ ತಿಂಗಳಲ್ಲಿ ವಕೀಲ ರಾಜೇಶ್ ವಿರುದ್ಧ ಪ್ರಕರಣ ದಾಖಲಾಗಿತ್ತು. ತನ್ನ ವಿರುದ್ಧ ದಾಖಲಾದ ಸೆಕ್ಷನ್ ವಿಚಾರದಲ್ಲಿ ವಕೀಲರು ಹೈಕೋರ್ಟಿನಲ್ಲಿ ಪ್ರಶ್ನೆ ಮಾಡಿದ್ದರು. ಆ ಜಾಗದಲ್ಲಿ ಆ ರೀತಿಯ ಘಟನೆ ನಡೆದಿಲ್ಲ. ಅದಕ್ಕೆ ಸಿಸಿಟಿವಿಯದ್ದೇ ಸಾಕ್ಷ್ಯ ಇದೆ. ಹಾಗಿದ್ದರೂ, ಸೆಕ್ಷನ್ 376- 2 ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು ಎಂದು ವಾದಿಸಿದ್ದರು.
Mangalore Sexual harassment case, High court refuses to quash case against accused advocate KSN Rajesh. The Karnataka High Court has rejected the appeal petition seeking quashing of sexual harassment case filed by the law student against the accused senior advocate K.S.N. Rajesh Bhat.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am