ಬ್ರೇಕಿಂಗ್ ನ್ಯೂಸ್
15-07-23 07:24 pm Mangalore Correspondent ಕರಾವಳಿ
ಮಂಗಳೂರು, ಜುಲೈ 15: ತುಳುನಾಡಿನ ಆರಾಧ್ಯ ದೈವ ಕೊರಗಜ್ಜ ಹಾಗೂ ಬಿಜೆಪಿ ಶಾಸಕ ಭರತ್ ಶೆಟ್ಟಿ ಬಗ್ಗೆ ಅವಹೇಳನಕಾರಿ ಬರಹಗಳನ್ನು ಬರೆದು ಹಿಂದುಗಳ ಭಾವನೆಗೆ ಧಕ್ಕೆ ತರುವುದು ಮತ್ತು ಕೋಮು ಪ್ರಚೋದನೆ ಮಾಡುವ ದುಷ್ಕೃತ್ಯಗಳು ಜಾಲತಾಣದಲ್ಲಿ ಕಂಡುಬರುತ್ತಿವೆ. ಇನ್ಸ್ಟಾ ಗ್ರಾಮ್ ನಲ್ಲಿ ಬ್ಯಾರಿ ಕಿಂಗ್ ಹಾಗು ಇನ್ನಿತರ ಖಾತೆಗಳಲ್ಲಿ ಈ ರೀತಿಯ ಪೋಸ್ಟ್ ಹರಿಯಬಿಡುತ್ತಿದ್ದು ಇವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮಂಗಳೂರು ಉತ್ತರ ಕ್ಷೇತ್ರದ ಯುವಮೋರ್ಚಾ ಮಂಡಲ ವತಿಯಿಂದ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಗೆ ದೂರು ನೀಡಲಾಗಿದೆ.
ಈ ಕುರಿತು ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಉತ್ತರ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಹಿಂದುಗಳ ಭಾವನೆಗೆ ಧಕ್ಕೆ ತರುವ ರೀತಿ ಅಥವಾ ನಮ್ಮ ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು. ಇದರ ಹಿಂದಿರುವ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಬೇಕು. ಇಂತಹ ಪೋಸ್ಟ್ ಗಳನ್ನು ಷೇರ್ ಮಾಡುವವರ ವಿರುದ್ಧ ಸೈಬರ್ ಕ್ರೈಂ ಕಾನೂನಿನ ಅನ್ವಯ ಕೇಸು ದಾಖಲಿಸಬೇಕು. ಕೋಮುಗಲಭೆಗೆ ಪ್ರಚೋದನೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶ ಇದರ ಹಿಂದಿದೆ. ಪೊಲೀಸ್ ಇಲಾಖೆ ಎಚ್ಚತ್ತು ಕ್ರಮ ಕೈಗೊಳ್ಳದೇ ಇದ್ದರೆ ಎಲ್ಲ ಪೊಲೀಸ್ ಠಾಣೆಗಳ ಮುಂದೆಯೂ ಪ್ರತಿಭಟನೆ ನಡೆಸಬೇಕಾದೀತು ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬ್ಯಾರಿ ಕಿಂಗ್ ಹೆಸರಿನಲ್ಲಿ ತನ್ನ ವಿರುದ್ಧ ಮಾನಹಾನಿ ಪೋಸ್ಟ್ ಹಾಕುತ್ತಿರುವ ಬಗ್ಗೆ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು ತೆರೆಮರೆಯಲ್ಲಿ ಕುಳಿತು ಕೆಲಸ ಮಾಡುವ ಕಾಣದ ಕೈಗಳ ದುಷ್ಕ್ರತ್ಯಗಳನ್ನು ಹೇಗೆ ನಿಲ್ಲಿಸಬೇಕು ಎಂಬುದು ತನಗೆ ತಿಳಿದಿದೆ ಎಂದು ಹೇಳಿದ್ದಾರೆ.
Facebook named after Beary King post deformative post against MLA Bharath Shetty, complaint filed by BJP Yuvamorcha in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm