ಬ್ರೇಕಿಂಗ್ ನ್ಯೂಸ್
15-07-23 07:24 pm Mangalore Correspondent ಕರಾವಳಿ
ಮಂಗಳೂರು, ಜುಲೈ 15: ತುಳುನಾಡಿನ ಆರಾಧ್ಯ ದೈವ ಕೊರಗಜ್ಜ ಹಾಗೂ ಬಿಜೆಪಿ ಶಾಸಕ ಭರತ್ ಶೆಟ್ಟಿ ಬಗ್ಗೆ ಅವಹೇಳನಕಾರಿ ಬರಹಗಳನ್ನು ಬರೆದು ಹಿಂದುಗಳ ಭಾವನೆಗೆ ಧಕ್ಕೆ ತರುವುದು ಮತ್ತು ಕೋಮು ಪ್ರಚೋದನೆ ಮಾಡುವ ದುಷ್ಕೃತ್ಯಗಳು ಜಾಲತಾಣದಲ್ಲಿ ಕಂಡುಬರುತ್ತಿವೆ. ಇನ್ಸ್ಟಾ ಗ್ರಾಮ್ ನಲ್ಲಿ ಬ್ಯಾರಿ ಕಿಂಗ್ ಹಾಗು ಇನ್ನಿತರ ಖಾತೆಗಳಲ್ಲಿ ಈ ರೀತಿಯ ಪೋಸ್ಟ್ ಹರಿಯಬಿಡುತ್ತಿದ್ದು ಇವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮಂಗಳೂರು ಉತ್ತರ ಕ್ಷೇತ್ರದ ಯುವಮೋರ್ಚಾ ಮಂಡಲ ವತಿಯಿಂದ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಗೆ ದೂರು ನೀಡಲಾಗಿದೆ.
ಈ ಕುರಿತು ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಉತ್ತರ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಹಿಂದುಗಳ ಭಾವನೆಗೆ ಧಕ್ಕೆ ತರುವ ರೀತಿ ಅಥವಾ ನಮ್ಮ ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು. ಇದರ ಹಿಂದಿರುವ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಬೇಕು. ಇಂತಹ ಪೋಸ್ಟ್ ಗಳನ್ನು ಷೇರ್ ಮಾಡುವವರ ವಿರುದ್ಧ ಸೈಬರ್ ಕ್ರೈಂ ಕಾನೂನಿನ ಅನ್ವಯ ಕೇಸು ದಾಖಲಿಸಬೇಕು. ಕೋಮುಗಲಭೆಗೆ ಪ್ರಚೋದನೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶ ಇದರ ಹಿಂದಿದೆ. ಪೊಲೀಸ್ ಇಲಾಖೆ ಎಚ್ಚತ್ತು ಕ್ರಮ ಕೈಗೊಳ್ಳದೇ ಇದ್ದರೆ ಎಲ್ಲ ಪೊಲೀಸ್ ಠಾಣೆಗಳ ಮುಂದೆಯೂ ಪ್ರತಿಭಟನೆ ನಡೆಸಬೇಕಾದೀತು ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬ್ಯಾರಿ ಕಿಂಗ್ ಹೆಸರಿನಲ್ಲಿ ತನ್ನ ವಿರುದ್ಧ ಮಾನಹಾನಿ ಪೋಸ್ಟ್ ಹಾಕುತ್ತಿರುವ ಬಗ್ಗೆ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು ತೆರೆಮರೆಯಲ್ಲಿ ಕುಳಿತು ಕೆಲಸ ಮಾಡುವ ಕಾಣದ ಕೈಗಳ ದುಷ್ಕ್ರತ್ಯಗಳನ್ನು ಹೇಗೆ ನಿಲ್ಲಿಸಬೇಕು ಎಂಬುದು ತನಗೆ ತಿಳಿದಿದೆ ಎಂದು ಹೇಳಿದ್ದಾರೆ.
Facebook named after Beary King post deformative post against MLA Bharath Shetty, complaint filed by BJP Yuvamorcha in Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm