ಬ್ರೇಕಿಂಗ್ ನ್ಯೂಸ್
15-07-23 07:56 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 15: ಹೆಣ ಸುಡಲು ಸ್ಮಶಾನವಿಲ್ಲದ ಕಾರಣ ಗ್ರಾಮಸ್ಥರು ಗ್ರಾಮ ಪಂಚಾಯತ್ ಮುಂದೆಯೇ ಶವಸಂಸ್ಕಾರಕ್ಕೆ ಮುಂದಾದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯಾದಲ್ಲಿ ನಡೆದಿದೆ. ರುದ್ರಭೂಮಿಗೆ ಜಾಗ ಕಾದಿರಿಸದ ಪಂಚಾಯತ್ ಆಡಳಿತದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಶವ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ನೆರಿಯಾ ಗ್ರಾಮದ ಜನತಾ ಕಾಲೋನಿಯ ವೃದ್ಧ ವ್ಯಕ್ತಿ ಮೃತಪಟ್ಟಿದ್ದು ಶವ ಸಂಸ್ಕಾರಕ್ಕೆ ಸ್ಥಳವಿಲ್ಲದ ಕಾರಣ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಶವವನ್ನು ಪಂಚಾಯತ್ ಕಚೇರಿ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸ್ಮಶಾನಕ್ಕೆ ಸ್ಥಳ ನಿಗದಿ ಮಾಡದೆ ಹೋದರೆ ಪಂಚಾಯತ್ ಎದುರೇ ಅಂತ್ಯಸಂಸ್ಕಾರ ನಡೆಸುವುದಾಗಿ ಹೇಳಿ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಈ ಹಿಂದೆ ಗ್ರಾಮಕ್ಕೊಂದು ಸ್ಮಶಾನಕ್ಕಾಗಿ ಹಲವು ಬಾರಿ ನೆರಿಯಾ ಗ್ರಾಮ ಪಂಚಾಯತ್ ಆಡಳಿತಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದರು.


ಜನರ ಆಕ್ರೋಶಕ್ಕೆ ಮಣಿದು ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಆಗಮಿಸಿದ್ದು ರುದ್ರಭೂಮಿಗೆ ಈ ಹಿಂದೆಯೇ ಜಾಗ ನೋಡಿದ್ದಾಗಿ ತಿಳಿಸಿದರು. ಪಕ್ಕದ ಇಟ್ಟಾಡಿ ಎಂಬಲ್ಲಿ ಸ್ಮಶಾನಕ್ಕಾಗಿ ಮೀಸಲಿಟ್ಟ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಆದರೆ ಪರಿಶೀಲನೆ ಸಂದರ್ಭದಲ್ಲಿ ಆ ಸ್ಥಳದಲ್ಲಿ ಸ್ಮಶಾನ ಮಾಡಲು ಬಿಡುವುದಿಲ್ಲ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದಾರೆ.
ಕೊನೆಗೆ, ಪಂಚಾಯತ್ ಸಮೀಪದ ಸರಕಾರಿ ಜಾಗವನ್ನೇ ಸ್ಮಶಾನಕ್ಕಾಗಿ ನಿಗದಿಪಡಿಸಲು ಆದೇಶ ಮಾಡುವುದಾಗಿ ತಹಸೀಲ್ದಾರ್ ತಿಳಿಸಿದ್ದಾರೆ. ಬಳಿಕ ಪ್ರತಿಭಟನೆಯನ್ನು ಹಿಂಪಡೆದ ಗ್ರಾಮಸ್ಥರು, ತಹಸೀಲ್ದಾರ್ ತೋರಿಸಿದ ಸ್ಥಳದಲ್ಲೇ ಅಂತ್ಯಸಂಸ್ಕಾರ ನಡೆಸಿದ್ದಾರೆ.
Due to the lack of cremation in Neria village of Belthangadi taluk, the funeral of the dead is being hampered and the villagers have protested in front of the village panchayat demanding to solve the problem.They protested in Neria saying that even though they have been demanding in several village councils for the last several years, no one is getting any response to the request of the villagers.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm