ಬ್ರೇಕಿಂಗ್ ನ್ಯೂಸ್
16-07-23 04:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಮತ್ತೆ ಎನ್ಐಎ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು ಕೋರ್ಟಿಗೆ ಶರಣಾಗಲು ಆಗಸ್ಟ್ 18ರ ಗಡುವು ನೀಡಿದ್ದಾರೆ.
ಆಗಸ್ಟ್ 18 ರೊಳಗೆ ಬೆಂಗಳೂರಿನ ಎನ್ಐಎ ಕೋರ್ಟಿಗೆ ಶರಣಾಗುವಂತೆ ಸೂಚಿಸಿ ಎನ್ಐಎ ಅಧಿಕಾರಿಗಳು ಆರೋಪಿಗಳ ಮನೆ ಗೋಡೆ, ಸಾರ್ವಜನಿಕ ಪ್ರದೇಶದಲ್ಲಿ ವಾರಂಟ್ ನೋಟಿಸ್ ಅಂಟಿಸಿದ್ದಾರೆ. ಸುಳ್ಯದ ಆಸುಪಾಸು ಮತ್ತು ಬೆಳ್ಳಾರೆಯಲ್ಲಿರುವ ಆರೋಪಿಗಳ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದು ಕೋರ್ಟ್ ವಾರಂಟ್ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಸ್ಥಳೀಯ ಪೊಲೀಸರ ನೆರವಿನಲ್ಲಿ ಆಗಸ್ಟ್ 18ರೊಳಗೆ ಕೋರ್ಟಿಗೆ ಶರಣಾಗಲು ಧ್ವನಿ ವರ್ಧಕದ ಮೂಲಕ ಪ್ರಕಟಣೆ ನೀಡಿದ್ದಾರೆ.



ಈ ಹಿಂದೆ ಜೂನ್ 30ರ ಒಳಗೆ ಕೋರ್ಟಿಗೆ ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಎನ್ಐಎ ಎಚ್ಚರಿಕೆ ನೀಡಿತ್ತು. ಅಲ್ಲದೆ, ಆರೋಪಿಗಳು ಎಲ್ಲಿದ್ದಾರೆಂದು ಸುಳಿವು ಕೊಟ್ಟವರಿಗೆ ನಗದು ಬಹುಮಾನದ ಘೋಷಣೆ ನೀಡಿದ್ದಾರೆ.
ಎಫ್ಐಆರ್ ನಲ್ಲಿ ಗುರುತಿಸಲ್ಪಟ್ಟ ಆರೋಪಿಗಳಾದ ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ಕೋಡಾಜೆ ಮಹಮ್ಮದ್ ಶರೀಫ್, ಮಸೂದ್ ಅಗ್ನಾಡಿ ಎಂಬವರ ಪತ್ತೆಗಾಗಿ ಮತ್ತೊಂದು ಗಡುವು ನೀಡಿದ್ದಾರೆ. ಈ ಹಿಂದಿನ ಗಡುವು ಕಳೆದರೂ ಆರೋಪಿಗಳ ಸುಳಿವು ಸಿಗದೇ ಇದ್ದುದರಿಂದ ಆ ಪೈಕಿ ಕೆಲವರು ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಗಡುವು ವಿಸ್ತರಿಸಲಾಗಿದ್ದು ಆಸ್ತಿ ಮುಟ್ಟುಗೋಲು ಹಾಕಲು ತಯಾರಿ ನಡೆಸಿದ್ಯಾ ಎನ್ನುವ ಅನುಮಾನ ಹುಟ್ಟಿಸಿದೆ.
Final calling for accused of Praveen Nettaru by NIA in Sullia.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm