ಬ್ರೇಕಿಂಗ್ ನ್ಯೂಸ್
16-07-23 04:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 16: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಮತ್ತೆ ಎನ್ಐಎ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು ಕೋರ್ಟಿಗೆ ಶರಣಾಗಲು ಆಗಸ್ಟ್ 18ರ ಗಡುವು ನೀಡಿದ್ದಾರೆ.
ಆಗಸ್ಟ್ 18 ರೊಳಗೆ ಬೆಂಗಳೂರಿನ ಎನ್ಐಎ ಕೋರ್ಟಿಗೆ ಶರಣಾಗುವಂತೆ ಸೂಚಿಸಿ ಎನ್ಐಎ ಅಧಿಕಾರಿಗಳು ಆರೋಪಿಗಳ ಮನೆ ಗೋಡೆ, ಸಾರ್ವಜನಿಕ ಪ್ರದೇಶದಲ್ಲಿ ವಾರಂಟ್ ನೋಟಿಸ್ ಅಂಟಿಸಿದ್ದಾರೆ. ಸುಳ್ಯದ ಆಸುಪಾಸು ಮತ್ತು ಬೆಳ್ಳಾರೆಯಲ್ಲಿರುವ ಆರೋಪಿಗಳ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದು ಕೋರ್ಟ್ ವಾರಂಟ್ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಸ್ಥಳೀಯ ಪೊಲೀಸರ ನೆರವಿನಲ್ಲಿ ಆಗಸ್ಟ್ 18ರೊಳಗೆ ಕೋರ್ಟಿಗೆ ಶರಣಾಗಲು ಧ್ವನಿ ವರ್ಧಕದ ಮೂಲಕ ಪ್ರಕಟಣೆ ನೀಡಿದ್ದಾರೆ.



ಈ ಹಿಂದೆ ಜೂನ್ 30ರ ಒಳಗೆ ಕೋರ್ಟಿಗೆ ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಎನ್ಐಎ ಎಚ್ಚರಿಕೆ ನೀಡಿತ್ತು. ಅಲ್ಲದೆ, ಆರೋಪಿಗಳು ಎಲ್ಲಿದ್ದಾರೆಂದು ಸುಳಿವು ಕೊಟ್ಟವರಿಗೆ ನಗದು ಬಹುಮಾನದ ಘೋಷಣೆ ನೀಡಿದ್ದಾರೆ.
ಎಫ್ಐಆರ್ ನಲ್ಲಿ ಗುರುತಿಸಲ್ಪಟ್ಟ ಆರೋಪಿಗಳಾದ ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ಕೋಡಾಜೆ ಮಹಮ್ಮದ್ ಶರೀಫ್, ಮಸೂದ್ ಅಗ್ನಾಡಿ ಎಂಬವರ ಪತ್ತೆಗಾಗಿ ಮತ್ತೊಂದು ಗಡುವು ನೀಡಿದ್ದಾರೆ. ಈ ಹಿಂದಿನ ಗಡುವು ಕಳೆದರೂ ಆರೋಪಿಗಳ ಸುಳಿವು ಸಿಗದೇ ಇದ್ದುದರಿಂದ ಆ ಪೈಕಿ ಕೆಲವರು ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಗಡುವು ವಿಸ್ತರಿಸಲಾಗಿದ್ದು ಆಸ್ತಿ ಮುಟ್ಟುಗೋಲು ಹಾಕಲು ತಯಾರಿ ನಡೆಸಿದ್ಯಾ ಎನ್ನುವ ಅನುಮಾನ ಹುಟ್ಟಿಸಿದೆ.
Final calling for accused of Praveen Nettaru by NIA in Sullia.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm