ಬ್ರೇಕಿಂಗ್ ನ್ಯೂಸ್
04-11-20 02:52 pm Udupi Correspondent ಕರಾವಳಿ
ಉಡುಪಿ, ನ.4: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿನಲ್ಲಿ ನಕಲಿ ಇಮೇಲ್ ಐಡಿ ಸೃಷ್ಟಿಸಿ ಮಣಿಪಾಲ ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಇ ಮೇಲ್ ಸಂದೇಶ ಕಳುಹಿಸಿ ವಂಚಿಸಲು ಯತ್ನಿಸಿದ ಪ್ರಕರಣ ನಡೆದಿದೆ.
ನ.1ರಂದು ಅಪರಿಚಿತ ವ್ಯಕ್ತಿ ‘ಸಿಎಂ ಕರ್ನಾಟಕ’ ಎಂಬ ನಕಲಿ ಮೇಲ್ ಐಡಿಯನ್ನು ಸೃಷ್ಟಿಸಿ, ಮುಖ್ಯಮಂತ್ರಿ ಕಚೇರಿಯಿಂದ ಇ- ಮೇಲ್ ಕಳುಹಿಸಿದ ರೀತಿ ಮೇಲ್ ಬಂದಿತ್ತು. ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹೆ) ಕುಲಸಚಿವ ಡಾ.ನಾರಾಯಣ ಸಭಾಹಿತ್ ಅವರ ರಿಜಿಸ್ಟಾರ್ ವಿಭಾಗದ ಮೇಲ್ ಐಡಿಗೆ ಇಮೇಲ್ ಸಂದೇಶ ಕಳುಹಿಸಲಾಗಿತ್ತು ಎಂದು ಉಡುಪಿ ಸೈಬರ್ ಠಾಣೆಗೆ ದೂರು ನೀಡಲಾಗಿದೆ.
ಈ ಸಂದೇಶದಲ್ಲಿ ‘ಮಾಹೆಯ ಶಿಕ್ಷಣ ಸಂಸ್ಥೆಗಳನ್ನು ಪುನಾರಂಭಿಸುವುದರ ವಿರುದ್ಧ ಇಲ್ಲಿನ ವಿವಿಧ ದೇಶಗಳ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿವೆ. ಕಾಲೇಜುಗಳನ್ನು ನವೆಂಬರ್/ಡಿಸೆಂಬರ್ನಲ್ಲಿ ಪುನಾರಂಭಿಸಲು ಪರಿಸ್ಥಿತಿ ಸೂಕ್ತವಾಗಿಲ್ಲ. 2021ರ ಜ.2ರ ವರೆಗೆ ತರಗತಿ ಆರಂಭಿಸಬಾರದು. ಒಂದು ವೇಳೆ ಜ.2ರಿಂದ ಪ್ರಾರಂಭಿಸಬೇಕಾದರೆ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪಡೆಯಬೇಕು’ ಎಂಬುದಾಗಿ ಮೇಲ್ ಮಾಡಿ ಯಾಮಾರಿಸಿದ್ದಾನೆ.
ಮುಖ್ಯಮಂತ್ರಿ ಹೆಸರಲ್ಲಿ ಸುಳ್ಳು ಇ-ಮೇಲ್ ಐಡಿಯನ್ನು ಸೃಷ್ಟಿಸಿದ್ದಲ್ಲದೆ, ಇಮೇಲ್ ಸಂದೇಶವನ್ನು ಮುಖ್ಯಮಂತ್ರಿಯವರೇ ಕಳುಹಿಸಿರುವ ರೀತಿಯಲ್ಲಿ ಸಂಸ್ಥೆಗೆ ತಪ್ಪು ಮಾಹಿತಿಯನ್ನು ನೀಡಿ ವಂಚಿಸಿರುವುದಾಗಿ ಡಾ.ನಾರಾಯಣ ಸಭಾಹಿತ್ ನೀಡಿರುವ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
A complaint has been lodged by Manipal University in the cyber crime police station for sending fake email in the name of Karnataka CM Yediyurappa.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm