ಬ್ರೇಕಿಂಗ್ ನ್ಯೂಸ್
04-11-20 02:52 pm Udupi Correspondent ಕರಾವಳಿ
ಉಡುಪಿ, ನ.4: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿನಲ್ಲಿ ನಕಲಿ ಇಮೇಲ್ ಐಡಿ ಸೃಷ್ಟಿಸಿ ಮಣಿಪಾಲ ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಇ ಮೇಲ್ ಸಂದೇಶ ಕಳುಹಿಸಿ ವಂಚಿಸಲು ಯತ್ನಿಸಿದ ಪ್ರಕರಣ ನಡೆದಿದೆ.
ನ.1ರಂದು ಅಪರಿಚಿತ ವ್ಯಕ್ತಿ ‘ಸಿಎಂ ಕರ್ನಾಟಕ’ ಎಂಬ ನಕಲಿ ಮೇಲ್ ಐಡಿಯನ್ನು ಸೃಷ್ಟಿಸಿ, ಮುಖ್ಯಮಂತ್ರಿ ಕಚೇರಿಯಿಂದ ಇ- ಮೇಲ್ ಕಳುಹಿಸಿದ ರೀತಿ ಮೇಲ್ ಬಂದಿತ್ತು. ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹೆ) ಕುಲಸಚಿವ ಡಾ.ನಾರಾಯಣ ಸಭಾಹಿತ್ ಅವರ ರಿಜಿಸ್ಟಾರ್ ವಿಭಾಗದ ಮೇಲ್ ಐಡಿಗೆ ಇಮೇಲ್ ಸಂದೇಶ ಕಳುಹಿಸಲಾಗಿತ್ತು ಎಂದು ಉಡುಪಿ ಸೈಬರ್ ಠಾಣೆಗೆ ದೂರು ನೀಡಲಾಗಿದೆ.

ಈ ಸಂದೇಶದಲ್ಲಿ ‘ಮಾಹೆಯ ಶಿಕ್ಷಣ ಸಂಸ್ಥೆಗಳನ್ನು ಪುನಾರಂಭಿಸುವುದರ ವಿರುದ್ಧ ಇಲ್ಲಿನ ವಿವಿಧ ದೇಶಗಳ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿವೆ. ಕಾಲೇಜುಗಳನ್ನು ನವೆಂಬರ್/ಡಿಸೆಂಬರ್ನಲ್ಲಿ ಪುನಾರಂಭಿಸಲು ಪರಿಸ್ಥಿತಿ ಸೂಕ್ತವಾಗಿಲ್ಲ. 2021ರ ಜ.2ರ ವರೆಗೆ ತರಗತಿ ಆರಂಭಿಸಬಾರದು. ಒಂದು ವೇಳೆ ಜ.2ರಿಂದ ಪ್ರಾರಂಭಿಸಬೇಕಾದರೆ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪಡೆಯಬೇಕು’ ಎಂಬುದಾಗಿ ಮೇಲ್ ಮಾಡಿ ಯಾಮಾರಿಸಿದ್ದಾನೆ.
ಮುಖ್ಯಮಂತ್ರಿ ಹೆಸರಲ್ಲಿ ಸುಳ್ಳು ಇ-ಮೇಲ್ ಐಡಿಯನ್ನು ಸೃಷ್ಟಿಸಿದ್ದಲ್ಲದೆ, ಇಮೇಲ್ ಸಂದೇಶವನ್ನು ಮುಖ್ಯಮಂತ್ರಿಯವರೇ ಕಳುಹಿಸಿರುವ ರೀತಿಯಲ್ಲಿ ಸಂಸ್ಥೆಗೆ ತಪ್ಪು ಮಾಹಿತಿಯನ್ನು ನೀಡಿ ವಂಚಿಸಿರುವುದಾಗಿ ಡಾ.ನಾರಾಯಣ ಸಭಾಹಿತ್ ನೀಡಿರುವ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
A complaint has been lodged by Manipal University in the cyber crime police station for sending fake email in the name of Karnataka CM Yediyurappa.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm