ಬ್ರೇಕಿಂಗ್ ನ್ಯೂಸ್
22-07-23 07:34 pm Mangalore Correspondent ಕರಾವಳಿ
ಉಳ್ಳಾಲ, ಜು.22: ಇಂದು ಮಧ್ಯಾಹ್ನ ಬೀಸಿದ ಭಾರೀ ಬಿರುಗಾಳಿಗೆ ತೊಕ್ಕೊಟ್ಟು ಫ್ಲೈ ಓವರ್ ಬಳಿಯ ವಾಣಿಜ್ಯ ಕಟ್ಟಡವೊಂದರ ಮೂರನೇ ಮಹಡಿಯಲ್ಲಿ ಅಳವಡಿಸಿದ್ದ ಬೃಹತ್ ಹೋರ್ಡಿಂಗ್ ಮುರಿದು ಬಿದ್ದ ಪರಿಣಾಮ ಪಾದಚಾರಿ ವೃದ್ಧರೋರ್ವರು ಗಾಯಗೊಂಡಿದ್ದು, ತೊಕ್ಕೊಟ್ಟಿನಲ್ಲಿ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಶನಿವಾರ ಮಧ್ಯಾಹ್ನ ಬೀಸಿದ ಬಿರುಗಾಳಿಗೆ ತೊಕ್ಕೊಟ್ಟಿನ ಗಂಗಾ ಕಾಂಪ್ಲೆಕ್ಸ್ ನ ಮೂರನೇ ಮಹಡಿಯಲ್ಲಿ ಅಳವಡಿಸಲಾಗಿದ್ದ ಬೃಹತ್ ಹೋರ್ಡಿಂಗ್ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಹೋರ್ಡಿಂಗ್ ಕೆಳಗೆ ಬೀಳದೆ ಕಟ್ಟಡದಲ್ಲೇ ಜೋತು ಬಿದ್ದ ಪರಿಣಾಮ ಯಾವುದೇ ದೊಡ್ಡ ಹಾನಿ ಉಂಟಾಗಿಲ್ಲ. ತೊಕ್ಕೊಟ್ಟು ಒಳಪೇಟೆ ಸಂಪರ್ಕ ರಸ್ತೆಯ ಬದಿಯಲ್ಲಿ ಇರುವ ಕಾಂಪ್ಲೆಕ್ಸ್ ನಲ್ಲಿ ಘಟನೆ ಸಂಭವಿಸಿದೆ. ನಿತ್ಯವೂ ಈ ಭಾಗದಲ್ಲಿ ಜನ ಸಂಚರಿಸುತ್ತಿದ್ದು ಹೋರ್ಡಿಂಗ್ ನೆಲಕ್ಕೆ ಬೀಳದ ಕಾರಣ ಸಂಭಾವ್ಯ ಅನಾಹುತ ತಪ್ಪಿದೆ.



ತೊಕ್ಕೊಟ್ಟು ಒಳಪೇಟೆಯಿಂದ ಹೆದ್ದಾರಿಗೆ ಬರುತ್ತಿದ್ದ ವೃದ್ಧರೋರ್ವರ ಮೈಗೆ ಹೋರ್ಡಿಂಗ್ನ ಕಬ್ಬಿಣದ ಸಲಾಕೆ ಬಿದ್ದು ಗಾಯವಾಗಿದ್ದು ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಟಿ ಜಿಟಿ ಸುರಿಯುತ್ತಿರುವ ಮಳೆಯ ನಡುವೆ ಕ್ರೇನ್ ಮುಖಾಂತರ ಹೋರ್ಡಿಂಗನ್ನ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು ವಾಹನ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಉಳ್ಳಾಲ ಮತ್ತು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Heavy winds and rain in Mangalore, huge hoarding falls, traffic blocked at Thokottu.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm