ಬ್ರೇಕಿಂಗ್ ನ್ಯೂಸ್
27-07-23 03:24 pm Mangalore Correspondent ಕರಾವಳಿ
ಮಂಗಳೂರು, ಜುಲೈ 27: ವಿಡಿಯೋ ಪ್ರಕರಣ ಮಕ್ಕಳಾಟಿಕೆ ವಿಷಯವೆಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ ಮುಸ್ಲಿಂ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಮಾಡ್ತಿದ್ರೆ ಕಾಂಗ್ರೆಸ್ ನವರು ತುದಿ ಕಾಲಲ್ಲಿ ನಿಲ್ಲುತ್ತಿದ್ದರು. ಇಷ್ಟರ ಒಳಗೆ ಎಲ್ಲರ ಮನೆ ಹೊಕ್ಕುತ್ತಿದ್ದರು, ಅರೆಸ್ಟ್ ಮಾಡುತ್ತಿದ್ದರು. ಈಗ ಹಿಂದೂಗಳು ಎಂಬ ಕಾರಣಕ್ಕೆ ಪ್ರಕರಣ ಮುಚ್ಚಿಹಾಕಲು ನೋಡುತ್ತಿದ್ದಾರೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ಕಿಡಿಕಾರಿದ್ದಾರೆ.
ಉಡುಪಿ ವಿಡಿಯೋ ಪ್ರಕರಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಪೊಲೀಸ್ ಅಧಿಕಾರಿಗಳ ಹೇಳಿಕೆಗಳು ವಿರೋಧಾಭಾಸದಿಂದ ಕೂಡಿದೆ. ಮೊಬೈಲ್ ನ್ನು ಫಾರೆನ್ಸಿಕ್ ಗೆ ಕಳಿಸಿ ತನಿಖೆ ಮಾಡುವ ಮೊದಲೇ ತರಾತುರಿಯಲ್ಲಿ ಯಾವುದೇ ಏನು ಸಾಕ್ಷಿಗಳು ಇಲ್ಲ ಎಂದಿದ್ದರು. ಈಗ ಅವರೇ ಎಫ್.ಐ.ಆರ್ ದಾಖಲಿಸಿದ್ದಾರೆ. ಮೊಬೈಲನ್ನು ಫಾರೆನ್ಸಿಕ್ ಕಳಿಸಿದ್ದಾರೆ. ನಾವು ಮಾಡಿದ್ದೇ ಸರಿ ಎಂದು ಸಾಧಿಸಲು ಹೊರಟರೆ ಕಷ್ಟವಿದೆ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ ಎಂದರು.
ಪ್ರಕರಣದಲ್ಲಿ ಪೊಲೀಸರ ತನಿಖೆ ಬಗ್ಗೆ ನಮಗೆ ವಿಶ್ವಾಸವಿಲ್ಲ. ಹೀಗಾಗಿ ವಿಶೇಷ ತನಿಖಾ ತಂಡ ರಚನೆ ಮಾಡಬೇಕು. ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತಂಡ ರಚಿಸಿ ತನಿಖೆ ಮಾಡಿದ್ರೆ ಅದಕ್ಕೊಂದು ಅರ್ಥವಿದೆ. ಈ ಹಿಂದೆಯೂ ಇಂತಹದ್ದೇ ಕೆಲಸ ಮಾಡುತ್ತಿದ್ದರೇ ಎಂಬ ಬಗ್ಗೆ ತನಿಖೆ ಆಗಬೇಕಿದೆ.
ಕೆಲವು ವರ್ಷಗಳಿಂದ ಈ ರೀತಿಯ ಕೃತ್ಯ ನಡೆಯುತ್ತಿದೆ ಎಂಬ ಅನುಮಾನ ಸಾರ್ವಜನಿಕರಲ್ಲಿದೆ. ವಿದ್ಯಾರ್ಥಿನಿಯರನ್ನು ಬ್ಲ್ಯಾಕ್ ಮೇಲ್ ಮಾಡುವಂತದ್ದು ಸಹ ನಡೆದಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಹೀಗಾಗಿ ಈ ಘಟನೆಯನ್ನು ಕ್ಷುಲ್ಲಕ, ಹಾಸ್ಯಾಸ್ಪದ ಎಂದು ಹೇಳಲು ಸಾಧ್ಯವಿಲ್ಲ. ಅಲ್ಲದೆ, ಈ ಮೂವರು ವಿದ್ಯಾರ್ಥಿನಿಯರು ಕೇರಳದವರಾಗಿದ್ದು ಅವರ ಹಿಂದೆ ಯಾರಿದ್ದಾರೆ ಅನ್ನುವ ಬಗ್ಗೆ ತನಿಖೆ ಆಗಬೇಕಿದೆ. ಇದರ ಹಿಂದಿರುವ ಕೈವಾಡ ಯಾರದ್ದು ಎಂಬ ಬಗ್ಗೆ ತನಿಖೆ ಮಾಡಬೇಕು.
ಜಾತಿ ಮತ ಬಿಟ್ಟು ತನಿಖೆ ಮಾಡುವ ಬಗ್ಗೆ ಸರ್ಕಾರ ಯೋಚಿಸಬೇಕು. ವಿಡಿಯೋ ರೆಕಾರ್ಡ್ ಮಾಡಿ ಸಿಕ್ಕಿ ಬೀಳದಿದ್ರೆ ಈ ವಿಡಿಯೋವನ್ನು ಏನು ಮಾಡುತ್ತಿದ್ದರು. ಸಾಕಷ್ಟು ಸಂಶಯ ಇರುವ ಕಾರಣ ಈ ವಿಚಾರದಲ್ಲಿ ಹೋರಾಟ ಮಾಡುತ್ತಿದ್ದೇವೆ. ಆದ್ರೆ ಕಾಂಗ್ರೆಸ್ ನವರು ಕಾಂಪಿಟೇಶನ್ ನಲ್ಲಿ ಟ್ವೀಟ್ ಹಾಕ್ತಿರೋದನ್ನು ನೋಡಿದರೆ, ಮುಚ್ಚಿ ಹಾಕುವ ಯತ್ನ ಕಾಣ್ತಿದೆ. ಯಾಕಂದ್ರೆ ಇವರಿಗೆ ಹಿಂದೂಗಳಂದ್ರೆ ತಾತ್ಸಾರ ಎಂಬ ಭಾವನೆ ಇದೆ. ಚುನಾವಣೆ ಬರುತ್ತೆ, ಹೋಗುತ್ತೆ ಆದ್ರೆ ನಾವು ಹಿಂದುತ್ವ ಪರವಾಗಿ ನಿಂತೇ ನಿಲ್ಲುತ್ತೇವೆ ಎಂದು ಶಾಸಕ ಭರತ್ ಶೆಟ್ಟಿ ಹೇಳಿದ್ದಾರೆ.
Udupi Camera in Toilet, Video is shot by Kerala students, probe should be conducted says MLA Bharath Shetty
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm