ಬ್ರೇಕಿಂಗ್ ನ್ಯೂಸ್
27-07-23 07:49 pm Udupi Correspondent ಕರಾವಳಿ
ಉಡುಪಿ, ಜುಲೈ 27: ನಾನು ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸಂಬಂಧಪಟ್ಟ ವಿಚಾರ. ಏನು ಹೇಳೋದಕ್ಕೂ ಸ್ವಲ್ಪ ಟೈಮ್ ಬೇಕಾಗತ್ತೆ. ಟು ಮಿನಿಟ್ಸ್ ನೂಡಲ್ಸ್ ಥರ ಅಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್, ತನ್ನನ್ನು ಪದೇ ಪದೇ ಪ್ರಶ್ನೆ ಮಾಡಿದ ಟಿವಿ ಪತ್ರಕರ್ತರ ಬಗ್ಗೆ ಗರಂ ಆಗಿದ್ದಾರೆ.
ವಿಡಿಯೋ ಪ್ರಕರಣ ಸಂಬಂಧಿಸಿ ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಚರ್ಚಿಸಿದ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು. ಈಗಷ್ಟೇ ನಾನು ತನಿಖೆಯನ್ನು ಆರಂಭಿಸಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ನಾನು ನಿಮಗೆ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರವಾಗಿದ್ದು ಸಾಕ್ಷ್ಯಗಳಿಗಾಗಿ ಕಾಯಬೇಕು. ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ. ನಾವೆಲ್ಲ ಇಂತಹದ್ದೇ ಶಿಕ್ಷಣ ಕೇಂದ್ರದಲ್ಲಿದ್ದು ಬಂದವರು. ಟಾಯ್ಲೆಟಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ ಎಂದರು.
ನೀವು ಮಹಿಳಾ ಆಯೋಗದಿಂದ ದೂರು ದಾಖಲು ಮಾಡಿಕೊಳ್ತೀರಾ ಎಂಬ ಪ್ರಶ್ನೆಗೆ, ನಾನು ಈಗಷ್ಟೇ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಮೊಬೈಲಿನಲ್ಲಿ ವಿಡಿಯೋ ರಿಕವರಿ ಆಗಬೇಕು. ಎಫ್ಎಸ್ಎಲ್ ರಿಪೋರ್ಟ್ ಬಂದ ಬಳಿಕವಷ್ಟೆ ಈ ಬಗ್ಗೆ ನಿರ್ಣಯ ಮಾಡಬೇಕಾಗತ್ತೆ. ಈಗ ಯಾವುದೇ ಮಾಹಿತಿ ಹಂಚಿಕೊಳ್ಳಲು ಆಗೋದಿಲ್ಲ. ಜನರು ಜಾಲತಾಣದಲ್ಲಿ ಬರುವ ಸುದ್ದಿಗಳನ್ನು ನಂಬಬೇಡಿ. ಅಂತಹ ಯಾವುದೇ ಅಸಲಿ ವಿಡಿಯೋ ಸಿಕ್ಕಿಲ್ಲ. ಜನರು ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಸಲಹೆ ಮಾಡಿದ್ದಾರೆ.
Kushboo slams media over Camera in college Toilet, says its not two minutes noodles to keep updating speaking to media persons in Udupi.
22-08-25 12:29 pm
HK News Desk
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
Dharmasthala, Acharya Sri Gunadharanandi Maha...
21-08-25 10:21 pm
ಸೌಹಾರ್ದ ಸಹಕಾರಿ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು ;...
21-08-25 06:24 pm
22-08-25 02:00 pm
HK News Desk
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
21-08-25 11:00 pm
Mangalore Correspondent
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm