ಬ್ರೇಕಿಂಗ್ ನ್ಯೂಸ್
27-07-23 07:49 pm Udupi Correspondent ಕರಾವಳಿ
ಉಡುಪಿ, ಜುಲೈ 27: ನಾನು ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸಂಬಂಧಪಟ್ಟ ವಿಚಾರ. ಏನು ಹೇಳೋದಕ್ಕೂ ಸ್ವಲ್ಪ ಟೈಮ್ ಬೇಕಾಗತ್ತೆ. ಟು ಮಿನಿಟ್ಸ್ ನೂಡಲ್ಸ್ ಥರ ಅಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್, ತನ್ನನ್ನು ಪದೇ ಪದೇ ಪ್ರಶ್ನೆ ಮಾಡಿದ ಟಿವಿ ಪತ್ರಕರ್ತರ ಬಗ್ಗೆ ಗರಂ ಆಗಿದ್ದಾರೆ.
ವಿಡಿಯೋ ಪ್ರಕರಣ ಸಂಬಂಧಿಸಿ ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಚರ್ಚಿಸಿದ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು. ಈಗಷ್ಟೇ ನಾನು ತನಿಖೆಯನ್ನು ಆರಂಭಿಸಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ನಾನು ನಿಮಗೆ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರವಾಗಿದ್ದು ಸಾಕ್ಷ್ಯಗಳಿಗಾಗಿ ಕಾಯಬೇಕು. ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ. ನಾವೆಲ್ಲ ಇಂತಹದ್ದೇ ಶಿಕ್ಷಣ ಕೇಂದ್ರದಲ್ಲಿದ್ದು ಬಂದವರು. ಟಾಯ್ಲೆಟಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ ಎಂದರು.
ನೀವು ಮಹಿಳಾ ಆಯೋಗದಿಂದ ದೂರು ದಾಖಲು ಮಾಡಿಕೊಳ್ತೀರಾ ಎಂಬ ಪ್ರಶ್ನೆಗೆ, ನಾನು ಈಗಷ್ಟೇ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಮೊಬೈಲಿನಲ್ಲಿ ವಿಡಿಯೋ ರಿಕವರಿ ಆಗಬೇಕು. ಎಫ್ಎಸ್ಎಲ್ ರಿಪೋರ್ಟ್ ಬಂದ ಬಳಿಕವಷ್ಟೆ ಈ ಬಗ್ಗೆ ನಿರ್ಣಯ ಮಾಡಬೇಕಾಗತ್ತೆ. ಈಗ ಯಾವುದೇ ಮಾಹಿತಿ ಹಂಚಿಕೊಳ್ಳಲು ಆಗೋದಿಲ್ಲ. ಜನರು ಜಾಲತಾಣದಲ್ಲಿ ಬರುವ ಸುದ್ದಿಗಳನ್ನು ನಂಬಬೇಡಿ. ಅಂತಹ ಯಾವುದೇ ಅಸಲಿ ವಿಡಿಯೋ ಸಿಕ್ಕಿಲ್ಲ. ಜನರು ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಸಲಹೆ ಮಾಡಿದ್ದಾರೆ.
Kushboo slams media over Camera in college Toilet, says its not two minutes noodles to keep updating speaking to media persons in Udupi.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm