ಬ್ರೇಕಿಂಗ್ ನ್ಯೂಸ್
04-11-20 08:35 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 4: ಮಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಯಡಿಯೂರಪ್ಪ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಿ.ಎಸ್ ಯಡಿಯೂರಪ್ಪ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಬಿಜೆಪಿ ಪ್ರಮುಖರು ಬರಮಾಡಿಕೊಂಡರು.
ಈ ವೇಳೆ, ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ , ಸಿಎಂ ಬದಲಾವಣೆ ಕುರಿತ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಗರಂ ಆಗಿ ಮಾತನಾಡಿದ್ರು. ಸಿದ್ದರಾಮಯ್ಯನವರ ಹೇಳಿಕೆಗೆ ನಾನು ರಿಯಾಕ್ಷನ್ ನೀಡುತ್ತಿರಲಿಲ್ಲ. ಮಾಧ್ಯಮದವರು ಪ್ರಶ್ನಿಸಿದ್ದಕ್ಕಾಗಿ ಪ್ರತಿಕ್ರಿಯಿಸುತ್ತಿದ್ದೇನೆ. ಸಿದ್ದರಾಮಯ್ಯ ಇನ್ನಾದ್ರೂ ಬೇಜವಾಬ್ದಾರಿ ಹೇಳಿಕೆ ನಿಲ್ಲಿಸಬೇಕು. ದಿಲ್ಲಿಯಿಂದ ನನಗೆ ಸುದ್ದಿ ಬಂದಿದೆ ಅಂತ ಸುಳ್ಳು ಹೇಳುವುದನ್ನ ಸಿದ್ದರಾಮಯ್ಯ ಮೊದಲು ನಿಲ್ಲಿಸಬೇಕು ಎಂದು ಹೇಳಿದರು.


ನಾನು ಕೂಡ ಇದೇ ರೀತಿ ಹೇಳಿಕೆ ಮಾತನಾಡಬೇಕಾಗುತ್ತೆ. ನನಗೂ ದೆಹಲಿಯಿಂದ ಮಾಹಿತಿ ಬಂದಿದೆ ಅಂತ. ವಿಪಕ್ಷ ನಾಯಕ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾಯಿಸುತ್ತಾರೆ ಅಂತ. ಇನ್ನಾದ್ರೂ ಜವಾಬ್ದಾರಿಯುತವಾಗಿ ಮಾತಾಡುವಂತೆ ಸಿದ್ದರಾಮಯ್ಯರಲ್ಲಿ ವಿನಂತಿ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದೆ. ಚುನಾವಣೆಯಲ್ಲಿ ನೂರಕ್ಕೆ ನೂರು ಕಾಂಗ್ರೆಸ್ ದಯನೀಯ ಸೋಲು ಅನುಭವಿಸಲಿದೆ. ಬೈ ಎಲೆಕ್ಷನ್, ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸೋಲನುಭವಿಸುತ್ತಾರೆ. ಎರಡೂ ಕಡೆಯಲ್ಲೂ ಬಿಜೆಪಿ ಗೆದ್ದೇ ಗೆಲ್ಲುತ್ತೆ. ಬಿಜೆಪಿ ಗೆದ್ಮೇಲೆ ಯಾರು ರಾಜೀನಾಮೆ ಕೊಡ್ಬೇಕಾಗುತ್ತೆ ಹೇಳಿ..? ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಾದರೆ, ಆವಾಗ ಕ್ರಮ ಆಗೋದು ಸಿದ್ದರಾಮಯ್ಯ ಮೇಲೋ ಅಥವಾ ಬೇರೆ ಯಾರಾದ್ರ ಮೇಲೋ ಎಂದು ಪ್ರಶ್ನೆ ಮಾಡಿದ್ರು.
Chief minister B S Yediyurappa arrived at Mangaluru International Airport on Wednesday, November 4. The CM reached on Wednesday evening to take part in the special executive meeting.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm